ಬ್ರೇಕಿಂಗ್ ನ್ಯೂಸ್
24-12-24 04:40 pm HK News Desk ಕರ್ನಾಟಕ
ಬೆಳಗಾವಿ, ಡಿ.24 : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿಟಿ ರವಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆಂಬ ಪ್ರಕರಣ ಭಾರೀ ಜಟಾಪಟಿಗೆ ಕಾರಣವಾಗಿರುವಂತೆಯೇ ಒಟ್ಟು ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ.
ಬಿಜೆಪಿ ಎಂಎಲ್ಸಿ ಸಿಟಿ ರವಿ ಅವಾಚ್ಯ ಶಬ್ಧ ಬಳಸಿರುವ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ದೂರು ನೀಡಿದ್ದರು. ಇತ್ತ ಸಿಟಿ ರವಿ ಅವರೂ ತನ್ನ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ದೂರು ನೀಡಿದ್ದರು. ಇದೀಗ ಈ ಎರಡೂ ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಇದೇ ವೇಳೆ ಪರಿಷತ್ ಕಾರ್ಯದರ್ಶಿ ನೀಡಿದ ದೂರಿನನ್ವಯ ಹಿರೇಬಾಗೆವಾಡಿ ಠಾಣೆಯಲ್ಲಿ ಹತ್ತು ಜನರ ಮೇಲೆ ದಾಖಲಾಗಿದ್ದ ಸುಮೋಟೋ ಕೇಸನ್ನೂ ವರ್ಗಾವಣೆ ಮಾಡುವ ಸಾಧ್ಯತೆಯಿದೆ.
ಇದರ ಬೆನ್ನಲ್ಲೇ ಪ್ರಕರಣದ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಸಭಾಪತಿ ಬಸವರಾಜ್ ಹೊರಟ್ಟಿ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದು, 7 ಪುಟಗಳ ದೂರಿನಲ್ಲಿ ಸಿಟಿ ರವಿ ಅವರು, ಸದನದಲ್ಲಿ ನಡೆದ ಘಟನೆ, ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪರಿಷತ್ ಸದಸ್ಯ ಬೋಸರಾಜ್ ಸೇರಿದಂತೆ ಹಲವರು ತನ್ನ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಸಭಾಪತಿಗಳಿಗೆ ಕೊಟ್ಟ ದೂರಿನಲ್ಲಿ ಪೊಲೀಸರಿಂದ ಹಕ್ಕು ಚ್ಯುತಿ ಆಗಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದು, ಜೀವ ಬೆದರಿಕೆ, ಮಾನಹಾನಿಯಾಗಿದೆ ಎಂದು ದೂರಿದ್ದಾರೆ. ಸಚಿವರ ಬೆಂಬಲಿಗರಿಂದ ಹಲ್ಲೆ ಯತ್ನ ನಡೆದ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ.
ಸತ್ಯ ಹೊರಬರಬೇಕು ಎಂಬುದಷ್ಟೇ ಉದ್ದೇಶ
ಇನ್ನು ಘಟನೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸಿಟಿ ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ಗೆ ಆ ರೀತಿ ಹೇಳಿಲ್ಲ ಅಂತಾರೆ. ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ಆಗಲೆಂದು ಸಿಐಡಿ ತನಿಖೆಗೆ ಹಸ್ತಾಂತರ ಮಾಡಲಾಗಿದೆ ಎಂದಿದ್ದಾರೆ. ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಕುರಿತ ಪ್ರಶ್ನೆಗೆ, ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಅಂತಾ ನಾವು ಇಲಾಖೆ ನಡೆಸೋಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ರು.
Home Minister G. Parameshwar had ordered handing over the case of alleged derogatory remarks by MLC and former Minister C.T. Ravi against Karnataka’s Women and Child Development Minister Laxmi Hebbalkar to the CID for inquiry.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm