ಬ್ರೇಕಿಂಗ್ ನ್ಯೂಸ್
24-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24 : ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎಂಬುದನ್ನು ಹೇಳಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯವರು ಹೂಹಾರ ಹಾಕಿ ಅವರನ್ನು ಸ್ವಾಗತಿಸುತ್ತಿದ್ದಾರೆ. ಅವರು ಹೇಳೋದು ನಿಜವೇ ಆದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ಸವಾಲು ಹಾಕಿದ್ದು, ಸಿಟಿ ರವಿ ನಿತ್ಯವೂ ಮಾಧ್ಯಮಗಳ ಮುಂದೆ ನಾನು ಯಾವುದೇ ಅಶ್ಲೀಲ ಪದ ಬಳಸಿಲ್ಲ ಎಂದು ವಾದಿಸುತ್ತಿದ್ದಾರೆ. ಹಾಗಿದ್ದರೆ ಧರ್ಮಸ್ಥಳದಲ್ಲಿ ನನ್ನ ಉಪಸ್ಥಿತಿಯಲ್ಲಿ ಈ ಕುರಿತು ಪ್ರಮಾಣ ಮಾಡಲಿ. ಧರ್ಮಸ್ಥಳ ಅವರಿಗೆ ಹತ್ತಿರವೇ ಇದೆ, ಅಲ್ಲಿಗೆ ಬರಲಿ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು.
ಸಿಟಿ ರವಿ ನನ್ನ ವಿರುದ್ಧ ಬಳಸಿರುವ ಪದ ಸಭ್ಯ ನಾಗರಿಕರು ಬಳಸುವಂತದ್ದಲ್ಲ. ಅದನ್ನು ನಾನು ತಪ್ಪಿಯೂ ನನ್ನ ಬಾಯಿಂದ ಆಡಲಾರೆ. ಆದರೆ ಅವರ ಪದ ಬಳಕೆಯಿಂದ ನನಗೆ ಆಗಿರುವ ನೋವು ಮಾತ್ರ ಅಗಾಧ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾಗಿ ನುಡಿದರು.
ಹೆಣ್ಣು ಮಕ್ಕಳ ಬಗ್ಗೆ ಸಿಟಿ ರವಿ ಅವರಿಗೆ ಅದೆಷ್ಟು ಗೌರವವಿದೆ ಎಂಬುದು ಈಗ ಗೊತ್ತಾಗಿದೆ. ಗೃಹ ಸಚಿವರು ಈಗ ಪ್ರಕರಣದ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪು ಮಾಡಿಲ್ಲ ಎಂದ ಮೇಲೆ ಸಿಟಿ ರವಿ ಯಾವ ತನಿಖೆಗೂ ಹೆದರಬಾರದು ಅಲ್ಲವೇ ಎಂದ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಮಿಕವಾಗಿ ಪ್ರಶ್ನಿಸಿದರು.
ಈ ಬಗ್ಗೆ ತಿರುಗೇಟು ನೀಡಿರುವ ಸಿಟಿ ರವಿ, ಧರ್ಮಸ್ಥಳ ನಮಗೆ ಪಕ್ಕದಲ್ಲೇ ಇರುವ ಊರು. ನಾನು ಆಗಾಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
Lakshmi Hebbalkar challenged CT Ravi to swear before Lord Manjunatha at Dharmasthala if he had not made those remarks. She said she will also be present in Dharmasthala with her family on that day and asked Ravi to come with his family too.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm