ಬ್ರೇಕಿಂಗ್ ನ್ಯೂಸ್
25-12-24 12:46 pm HK News Desk ಕರ್ನಾಟಕ
ಬಾಗಲಕೋಟೆ/ಬೆಳಗಾವಿ, ಡಿ 25: ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ ಗಾಯಗೊಂಡ ದುರ್ಘಟನೆ ಸಂಭವಿಸಿತ್ತು.
ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಬೆಳಗಾವಿ ತಾಲೂಕಿನ ಪಂತನಗರದ ಯೋಧ ದಯಾನಂದ ತಿರಕಣ್ಣವರ (44) ಹಾಗೂ ಕುಂದಾಪುರದ ಅನೂಪ್ ಎಂಬವರೂ ಕೂಡ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹೇಶ್ ಮರಿಗೊಂಡ ಅವರು 11ನೇ ಮರಾಠಾ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೈನಿಕರನ್ನು ಹೊತ್ತ ವಾಹನವು ಮೆಂಡರ್ ಎಂಬ ಪ್ರದೇಶಕ್ಕೆ ಕರ್ತವ್ಯಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ.
ಸಿಎಂ ಸಂತಾಪ:
ಈ ಬಗ್ಗೆ ಮುಖ್ಯಮಂತ್ರಿಗಳು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ''ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ'' ಎಂದಿದ್ದಾರೆ.
Five soldiers died after an army vehicle fell into a gorge in Jammu and Kashmir's Poonch on Tuesday. Of them, three -- Dayanand Thirakannavara, Anoop and Mahesh Marigonda -- were from Karnataka.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm