ಬ್ರೇಕಿಂಗ್ ನ್ಯೂಸ್
25-12-24 10:10 pm HK News Desk ಕರ್ನಾಟಕ
ಬೆಳಗಾವಿ, ಡಿ.25: ಬಿಜೆಪಿ ಶಾಸಕ ಸಿ.ಟಿ.ರವಿ ಬಂಧನ ಸಂದರ್ಭದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆಂದು ಖಾನಾಪುರ ಪೊಲೀಸ್ ಇನ್ ಸ್ಪೆಕ್ಟರ್ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿ ನಾಯಕರಿಗೆ ಠಾಣೆಯ ಒಳಗೆ ಬರಲು ಅವಕಾಶ ನೀಡಿದ್ದಕ್ಕಾಗಿ ಮಂಜುನಾಥ್ ನಾಯಕರನ್ನು ಅಮಾನತು ಮಾಡಿ ಬೆಳಗಾವಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ಸಿಟಿ ರವಿಯನ್ನು ಬಂಧಿಸಿದ ನಂತರ, ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಬೆಳಗಾವಿ ಮತ್ತು ಬಾಗಲಕೋಟೆಯ ಹಲವು ಪ್ರದೇಶಗಳಲ್ಲಿ ರಾತ್ರಿಯಿಡೀ ಸುತ್ತಾಡಿಸಲಾಗಿತ್ತು. ಆ ವೇಳೆ, ಖಾನಾಪುರ ಠಾಣೆಯಲ್ಲಿ ಬಿಜೆಪಿ ನಾಯಕರನ್ನು ಒಳಬಿಟ್ಟ ತಪ್ಪಿಗೆ, ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ, ಐಜಿಪಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಐಜಿಪಿ ವಿಕಾಸ್ ಕುಮಾರ್, ಡಿಸೆಂಬರ್ 19ರಂದು ಸಿ.ಟಿ.ರವಿಯವರನ್ನು ಬಂಧಿಸಲಾಗಿತ್ತು, ಅವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಶಿಫ್ಟ್ ಮಾಡಲಾಗಿತ್ತು. ಆ ವೇಳೆ, ಸೂಕ್ತ ಭದ್ರತೆಯನ್ನು ಒದಗಿಸಿ, ಯಾರನ್ನೂ ಯಾವುದೇ ಕಾರಣಕ್ಕೂ ಒಳಗೆ ಬಿಡದಂತೆ ಆದೇಶ ನೀಡಲಾಗಿತ್ತು. ಅದನ್ನು ಪಾಲಿಸಲಾಗಿಲ್ಲ ಎಂದು ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಆದೇಶದ ಹೊರತಾಗಿಯೂ, ಠಾಣೆಯಲ್ಲಿ ಸೂಕ್ತ ಬಂದೋಬಸ್ತ್ ಅನ್ನು ಮಾಡಿರಲಿಲ್ಲ. ಠಾಣೆಯ ಒಳಗೆ ರಾಜಕೀಯ ನಾಯಕರು ಬಲವಂತವಾಗಿ ಒಳಗೆ ಬಂದಿದ್ದರು. ಅಷ್ಟೇ ಅಲ್ಲದೇ, ಸಭೆಯನ್ನೂ ನಡೆಸಿದ್ದರು. ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಹಿನ್ನಲೆಯಲ್ಲಿ ಅಮಾನತಿನ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಜಿಪಿ ಸ್ಪಷ್ಟಪಡಿಸಿದ್ದಾರೆ.
ಅಮಾನತು ಆದೇಶವನ್ನು ಖಂಡಿಸಿ, ಬಿಜೆಪಿ ಬೆಳಗಾವಿ ಘಟಕದಿಂದ ಗುರುವಾರ ಡಿ.26ರಂದು ಖಾನಾಪುರ ಬಂದ್ ಗೆ ಕರೆ ನೀಡಿದೆ. ಬಿಜೆಪಿ ನೀಡಿರುವ ಬಂದ್ ಕರೆಗೆ, ಜೆಡಿಎಸ್ ಮತ್ತು ಹಲವು ದಲಿತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಇದೇ ವಿಚಾರದಲ್ಲಿ ಬೆಳಗಾವಿಯಲ್ಲಿರುವ ಗೃಹ ಸಚಿವ ಪರಮೇಶ್ವರ್ ಅವರನ್ನು ಪ್ರಶ್ನಿಸಿದಾಗ, ಅದು ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಮಾಡಿದ್ದಾರೆ. ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋದು ಅವರಿಗೆ ಗೊತ್ತಿರುವುದು. ಅದಕ್ಕೆ ಸರ್ಕಾರ ಇನ್ವಾಲ್ ಆಗುವುದಿಲ್ಲ. ಯಾವ ಸೂಚನೆಯನ್ನೂ ಕೊಡುವುದಿಲ್ಲ. ಇಲಾಖೆ ಹಂತದಲ್ಲಿ ಯಾವ ಲ್ಯಾಪ್ಸ್ ಇತ್ತು ಅವರಿಗೆ ಗೊತ್ತು. ಸ್ಪೆಸಿಫಿಕ್ ಆಗಿ ಅವರನ್ನೇ ಮಾಡಬೇಕು ಅಂದ್ರೆ ಯಾವ ಕಾರಣಕ್ಕೆ ಆಗಿದೆ ಗೊತ್ತಿಲ್ಲ ಎಂದಿದ್ದಾರೆ.
ಸಿಟಿ ರವಿ ಹಲ್ಲೆ ಆರೋಪಿ ಬಂಧನ ಆಗದ ಬಗ್ಗೆ ಕೇಳಿದ್ದಕ್ಕೆ, ಸಿಒಡಿ ತನಿಖೆಗೆ ಕೊಟ್ಟಿದ್ದೇವೆ. ಈಗ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ಮಾಧ್ಯಮದವರನ್ನ ಕೇಳಿ ಮಾಡಬೇಕಾ ಎಂದು ಮಾಧ್ಯಮದವರ ಮೇಲೆ ಪರಂ ಗರಂ ಆದರು.
Police Inspector of Khanapur station has been suspended for dereliction of duty by allegedly letting in political leaders and others inside the station while BJP MLC C T Ravi was in custody in connection with a case registered against him, officials said on Wednesday.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm