ಬ್ರೇಕಿಂಗ್ ನ್ಯೂಸ್
27-12-24 11:24 am Bangalore Correspondent ಕರ್ನಾಟಕ
ಬೆಂಗಳೂರು, ಡಿ.27: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಡಿ.27ರ ಶುಕ್ರವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಅಲ್ಲದೆ, ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಇದರಂತೆ, ರಾಜ್ಯಾದ್ಯಂತ ಇಂದು ಶಾಲೆ, ಕಾಲೇಜುಗಳಿಗೆ ರಜೆ ಇರಲಿದೆ. ಬ್ಯಾಂಕ್ ಸಹಿತ ಎಲ್ಲ ಸರ್ಕಾರಿ ಕಚೇರಿಗಳು ಮುಚ್ಚಲಿವೆ. ಇದಲ್ಲದೆ, ಮೂರು ದಿನಗಳ ಕಾಲ ಎಲ್ಲ ಸರ್ಕಾರಿ ಕಚೇರಿ ಕಟ್ಟಡಗಳಲ್ಲಿ ಅರ್ಧ ಮಟ್ಟಕ್ಕೆ ರಾಷ್ಟ್ರಧ್ವಜ ಹಾರಿಸಲು ಸೂಚಿಸಲಾಗಿದೆ. ಡಿ.27ರಿಂದ ಜನವರಿ 1ರ ವರೆಗೆ ಶೋಕಾಚರಣೆ ಇರಲಿದ್ದು ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಸರ್ಕಾರದ ಉಪ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶ ಪ್ರಕಾರ, ಹೊಸ ವರ್ಷ ಪ್ರಯುಕ್ತ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ ಮನೋರಂಜನಾ ಕಾರ್ಯಕ್ರಮ ರದ್ದುಪಡಿಸಲಾಗಿದೆ. ಮಂಗಳೂರು, ಮೈಸೂರು, ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಗಳೆಲ್ಲ ರದ್ದಾಗಲಿವೆ. ಮೈಸೂರು ಅರಮನೆ ಆವರಣದದಲ್ಲಿ ಡಿ.31ರ ರಾತ್ರಿ ಆಯೋಜನೆಗೊಂಡ ಸಂಗೀತ ಕಾರ್ಯಕ್ರಮ, ಪಟಾಕಿ ಸಿಡಿಸುವ ಸಂಭ್ರಮ ನಡೆಯುವುದಿಲ್ಲ. ಮಂಗಳೂರಿನಲ್ಲಿ ಕರಾವಳಿ ಉತ್ಸವ ಪ್ರಯುಕ್ತ ಏರ್ಪಡಿಸಿರುವ ಮನೋರಂಜನಾ ಕಾರ್ಯಕ್ರಮ ರದ್ದಾಗಲಿವೆ. ಉಳಿದಂತೆ, ಇತರೇ ವ್ಯಾಪಾರ ಚಟುವಟಿಕೆ ಮುಂದುವರಿಯಲಿದೆ. ಖಾಸಗಿಯಾಗಿ ನಡೆಸುವ ಕಾರ್ಯಕ್ರಮಗಳಿಗೆ ಇದರಿಂದ ತೊಂದರೆ ಆಗುವುದಿಲ್ಲ.
ಕ್ರಿಸ್ಮಸ್ ಮತ್ತು ಹೊಸ ವರ್ಷದ ಅಂಗವಾಗಿ ಅನೇಕರು ಪ್ರವಾಸದಲ್ಲಿದ್ದು ಪ್ರವಾಸಿ ತಾಣದಲ್ಲಿ ಭಾರೀ ಜನಸಂದಣಿ ಏರ್ಪಟ್ಟಿದೆ. ಈ ನಡುವೆ ಶುಕ್ರವಾರವೂ ಸರ್ಕಾರಿ ರಜೆ ಘೋಷಣೆ ಆಗಿರುವುದರಿಂದ ಸತತ ಮೂರು ದಿನಗಳ ರಚನೆಯಿಂದಾಗಿ ಉದ್ಯೋಗಸ್ಥರು ಪ್ರವಾಸ ಹೊರಡಲು ಮುಂದಾಗಿದ್ದಾರೆ.
ಬೀಚ್ ಉತ್ಸವ ಮುಂದೂಡಿಕೆ
ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ಮಂಗಳೂರಿನ ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವ ಮುಂದೂಡಲ್ಪಟ್ಟಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Manmohan Singh death, Mangalore beach festival has been postponed. The beach festival was being organised as a part of the month-long Karavali Utsava. The next date for the beach festival will be announced shortly, said the district administration.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm