ಬ್ರೇಕಿಂಗ್ ನ್ಯೂಸ್
02-01-25 02:44 pm Bangalore Correspondent ಕರ್ನಾಟಕ
ಬೆಂಗಳೂರು, ಜ 02: ಇಲ್ಲಿನ ಮಹದೇವಪುರ ಸಮೀಪದ ಬೈಕ್ ಶೋರೂಂನಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಸುಮಾರು 50 ಕ್ಕಿಂತಲೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿರುವುದಾಗಿ ಗುರುವಾರ (ಜ.02) ಪೊಲೀಸರು ತಿಳಿಸಿದ್ದಾರೆ
ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಆಕಸ್ಮಿಕ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಶೋರೂಂ ಮುಚ್ಚಿರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದಿಂದ ದಟ್ಟ ಹೊಗೆ ಹೊರಬೀಳುತ್ತಿರುವುದನ್ನು ಗಮನಿಸಿದ ಅಲ್ಲಿನ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್ಗೆ ಸಹ ಬೆಂಕಿ ತಗುಲಿದೆ.
ತಕ್ಷಣ ಆಗ್ನಿಶಾಮಕ ಸಿಬ್ಬಂದಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಹೆಚ್ಚು ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್ಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಅವಘಡ ಸಂಭಿವಿಸಿದ ಶೋರೂಂ ಪಕ್ಕದಲ್ಲಿ ಮತ್ತೊಂದು ಶೋರೂಂ ಇದ್ದು, ಅಲ್ಲಿಗೂ ಬೆಂಕಿ ವ್ಯಾಪಿಸಿತ್ತು. ಅಲ್ಲಿನ ಬೈಕ್ಗಳನ್ನು ತಕ್ಷಣ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
A fire broke out at a bike showroom near Mahadevapura on Thursday, gutting at least fifty two-wheelers, according to police. The incident, which occurred last night, is believed to have been caused by an electric short circuit.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:13 pm
Mangalore Correspondent
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
Mangalore, Suhas Shetty Murder, Anti Communia...
03-05-25 02:58 pm
Mangalore Suhas Shetty Murder, Instagram, Pol...
02-05-25 10:47 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm