ಬ್ರೇಕಿಂಗ್ ನ್ಯೂಸ್
15-12-20 01:16 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ ಕಲಾಪದಲ್ಲಿ ಪ್ರಜಾ ಪ್ರತಿನಿಧಿಗಳು ತಲೆತಗ್ಗಿಸುವ ರೀತಿ ಬಿಜೆಪಿ- ಕಾಂಗ್ರೆಸ್ ಸದಸ್ಯರು ನಡೆದುಕೊಂಡಿದ್ದಾರೆ. ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಕೆಳಗಿಳಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದ ಬಿಜೆಪಿ ಸದಸ್ಯರು ಹೈಡ್ರಾಮಾ ನಡೆಸಿದ್ದಾರೆ. ಈ ನಡುವೆ, ಕಲಾಪ ಆರಂಭಕ್ಕೂ ಮುನ್ನ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡರನ್ನು ಕಾಂಗ್ರೆಸ್ ಸದಸ್ಯರು ಪೀಠಿದಿಂದ ಎಳೆದಾಡಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿಧಾನ ಪರಿಷತ್ತಿನ ಮಂಡಿಸುವ ಸಲುವಾಗಿ ಒಂದು ದಿನದ ಕಲಾಪವನ್ನು ನಿಗದಿಪಡಿಸಲಾಗಿತ್ತು. ಆದರೆ, ಬಿಜೆಪಿ ಸದಸ್ಯರು ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದರಿಂದ ಈ ವಿಚಾರ ಹೈಡ್ರಾಮಾಕ್ಕೆ ಕಾರಣವಾಯಿತು. ಕಲಾಪಕ್ಕೆ ಸಭಾಪತಿಯವರು ಆಗಮಿಸುವ ಮೊದಲೇ ಉಪ ಸಭಾಪತಿಯವರನ್ನು ಕೂರಿಸಿ, ಬಿಜೆಪಿ ಕಲಾಪ ಆರಂಭಿಸಲು ಪ್ಲಾನ್ ಹಾಕಿತ್ತು. ಅಲ್ಲದೆ, ಸಭಾಪತಿ ಕಲಾಪಕ್ಕೆ ಆಗಮಿಸುವ ಬಾಗಿಲನ್ನು ಮುಚ್ಚಿ ಪ್ರತಾಪಚಂದ್ರ ಶೆಟ್ಟಿಗೆ ತಡೆ ಹಾಕಿದ್ದರು. ಇದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ಗದ್ದಲ ಎಬ್ಬಿಸಿದ್ದಾರೆ. ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಉಪ ಸಭಾಪತಿ ಅವರನ್ನು ಬಲವಂತವಾಗಿ ಎಳೆದಾಡಿದ್ದಾರೆ. ಸಭಾಪತಿ ಪೀಠದಿಂದಲೇ ಬಲ ಪ್ರಯೋಗಿಸಿ ಎಬ್ಬಿಸಿದ್ದಲ್ಲದೆ, ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಎಳೆದಾಡಿದ್ದಾರೆ.


ಇಷ್ಟಾಗುತ್ತಿದ್ದಂತೆ ಮಾರ್ಶಲ್ ಗಳು ಆಗಮಿಸಿದ್ದು, ಅವರ ಮೇಲೂ ಕಾಂಗ್ರೆಸ್ ಸದಸ್ಯರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ, ಜೆಡಿಎಸ್ ಸದಸ್ಯರು ವಿಧಾನ ಪರಿಷತ್ ಕಲಾಪ ಅನ್ನುವುದನ್ನೇ ಮರೆತು ಬೀದಿ ರೌಡಿಗಳ ರೀತಿ ಪರಸ್ಪರ ತಳ್ಳಾಟ, ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಸದಸ್ಯರು ಸಭಾಪತಿ ಆಗಮಿಸುವ ಬಾಗಿಲನ್ನು ಒಡೆದು ಹಾಕಿದ್ದಾರೆ. ಬಿಜೆಪಿ ಸದಸ್ಯರ ತಡೆಯನ್ನು ಭೇದಿಸಿ, ಸಭಾಪತಿ ಪ್ರತಾಪಚಂದ್ರ ಶೆಟ್ಟಿಯವರನ್ನು ಒಳಗೆ ಕರೆಸಿಕೊಂಡಿದ್ದಾರೆ. ಸದನದಲ್ಲಿ ಗಲಾಟೆ, ಗದ್ದಲ ನಡೆಯುತ್ತಿದ್ದಂತೆಯೇ ಒಳಗೆ ಬಂದ ಸಭಾಪತಿ, ನೇರವಾಗಿ ಕಲಾಪವನ್ನು ಮತ್ತೆ ಅನಿರ್ದಿಷ್ಟ ಅವಧಿಗೆ ಮುಂದೂಡಿದ್ದಾರೆ.

ಕಳೆದ ಗುರುವಾರ ಇದೇ ರೀತಿ, ಸಭಾಪತಿ ಕಲಾಪವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆಬಳಿಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಅವಿಶ್ವಾಸ ಗೊತ್ತುವಳಿ ಚರ್ಚೆ ಆಗಬೇಕೆಂದು ಬಿಜೆಪಿ ಪಟ್ಟು ಹಿಡಿದು ಒಂದು ದಿನದ ಕಲಾಪ ನಡೆಸಲು ರಾಜ್ಯಪಾಲರಿಗೆ ಒತ್ತಡ ಹೇರಿದ್ದರು. ಅದರಂತೆ, ಒಂದು ದಿನದ ಕಲಾಪ ಕರೆಯಲಾಗಿತ್ತು. ಆದರೆ, ಬಿಜೆಪಿ ಸದಸ್ಯರು ಸಭಾಪತಿಯವರನ್ನೇ ಬದಲಾಯಿಸಲು ತಯಾರಿ ಮಾಡಿಕೊಂಡಿದ್ದರು. ಇಂದು ಸದನ ಆರಂಭಗೊಳ್ಳುವ ಮೊದಲೇ ಉಪ ಸಭಾಪತಿ ಜೆಡಿಎಸ್ ಪಕ್ಷದ ಧರ್ಮೇಗೌಡರನ್ನು ಪೀಠದಲ್ಲಿ ಕುಳ್ಳಿರಿಸಿದ್ದರು. ಅಲ್ಲದೆ, ಬಿಜೆಪಿ ಸದಸ್ಯರು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಿದ್ದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು ಗದ್ದಲ ಎಬ್ಬಿಸಿದ್ದಲ್ಲದೆ ಸಭಾಪತಿ ಪೀಠದಲ್ಲಿದ್ದ ಧರ್ಮೇಗೌಡರನ್ನು ಪೀಠದಿಂದ ಎಳೆದಾಡಿದ್ದಾರೆ.

ಸಭಾಪತಿ ಪೀಠದಲ್ಲಿ ಕೂರುವಂತಿಲ್ಲ
ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟೀಸನ್ನು 15 ದಿನಗಳ ಮೊದಲೇ ನೀಡಿದ್ದೆವು. ಹಾಗಿರುವಾಗ, ಸಭಾಪತಿ ಪೀಠದಲ್ಲಿ ಪ್ರತಾಪಚಂದ್ರ ಶೆಟ್ಟಿ ಕೂರುವಂತಿಲ್ಲ. ಇಂದು ವಿಶೇಷ ಕಲಾಪ ಕರೆದಿದ್ದು, ಇದನ್ನು ಉಪ ಸಭಾಪತಿಯವರೇ ನಡೆಸಬೇಕು. ಸಭಾಪತಿಗೆ ವಿಶ್ವಾಸ ಇದ್ದರೆ, ಸದನಕ್ಕೆ ಬಂದು ವಿಶ್ವಾಸ ಸಾಬೀತುಪಡಿಸಬೇಕಿತ್ತು. ಕಾಂಗ್ರೆಸ್ ಸದಸ್ಯರು ಗದ್ದಲ, ಕಿತ್ತಾಟ ನಡೆಸಿದ್ದು ಎಷ್ಟು ಸರಿ ಎಂದು ವಿಧಾನ ಪರಿಷತ್ ಸದಸ್ಯೆ ಬಿಜೆಪಿಯ ತೇಜಸ್ವಿನಿ ಗೌಡ ಹೇಳಿದ್ದಾರೆ.
ರಾಜ್ಯಪಾಲರಿಗೆ ದೂರು
ಸದನದಲ್ಲಿ ಹೈಡ್ರಾಮಾ ನಡೆದಿದ್ದು ಮತ್ತು ಸಭಾಪತಿ ನಡುವೆ ಬಂದು ಕಲಾಪವನ್ನು ಮತ್ತೆ ಮುಂದೂಡಿದ್ದು ಕಾನೂನು ಬಿಕ್ಕಟ್ಟು ಎದುರಾಗಿದ್ದರಿಂದ ಇವೆಲ್ಲ ವಿಚಾರದ ಬಗ್ಗೆ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಲು ನಿರ್ಧರಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm