ಬ್ರೇಕಿಂಗ್ ನ್ಯೂಸ್
05-01-25 10:56 pm Bangalore Correspondent ಕರ್ನಾಟಕ
ಬೆಂಗಳೂರು, ಜ 05 : ವಿಧಾನ ಪರಿಷತ್ ನಲ್ಲಿ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು, ಪ್ರತಿ ದೂರುಗಳು ದಾಖಲಾಗುತ್ತಲೇ ಇವೆ. ಇದೀಗ ಸಿಟಿ ರವಿ ಡಿಸೆಂಬರ್ 19ರಂದು ಬೆಳಗಾವಿಯಲ್ಲಿ ತಮ್ಮ ಬಂಧನದ ವೇಳೆ ಪೊಲೀಸ್ ದೌರ್ಜನ್ಯ ನಡೆದಿದ್ದು ಇದರ ಬಗ್ಗೆ 13 ಪುಟಗಳ ದೂರನ್ನು ಇ-ಮೇಲ್ ಮೂಲಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಸಿದ್ದಾರೆ.
ಸಿಟಿ ತಮ್ಮ ದೂರಿನಲ್ಲಿ ಡಿಸಿಎಂ ಡಿಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅವರ ಪಿಎಗಳು ಹಾಗೂ ಹಿರೇಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.
ಇದೇ ವೇಳೆ ಪ್ರಕರಣ ದಾಖಲಿಸಿಕೊಂಡಿರುವ ಸಿಐಡಿ ತನಿಖೆ ಕೈಗೊಂಡು ದಾಖಲೆಗಳನ್ನ ಸಂಗ್ರಹಿಸುತ್ತಿದ್ದು, ಸಿಟಿ ರವಿಗೂ ನೋಟಿಸ್ ಕೊಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತೊಂದು ಕಡೆ ರಾಜ್ಯಪಾಲರಿಗೆ, ಡಿಐಜಿ ಅಲೋಕ್ ಮೋಹನ್ ಅವರಿಗೆ ಸಿಟಿ ರವಿ ದೂರು ನೀಡಿದ್ದು, ನಾನು ಕೊಟ್ಟ ದೂರಿನ ಸಂಬಂಧ ಎಫ್ಐಆರ್ ಆಗಿಲ್ಲವೆಂದು ಕಿಡಿಕಾರಿದ್ದಾರೆ.
ತನಗೆ ಇನ್ನೂ ಅಪಾಯವಿದ್ದು, ಕೇಂದ್ರೀಯ ಸಶಸ್ತ್ರ ಭದ್ರತೆಯನ್ನ ಒದಗಿಸುವಂತೆ ದೂರಿನಲ್ಲಿ ಸಿಟಿ ರವಿ ಮನವಿ ಮಾಡಿದ್ದಾರೆ. ಪ್ರತಿಯೊಬ್ಬ ಅಪರಾಧಿಗೂ ಶಿಕ್ಷೆ ಆಗಬೇಕು. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮೂಡುವಂತಾಗಬೇಕು. ಮತ್ತೆ ಈ
ರೀತಿಯ ಪೊಲೀಸ್ ದೌರ್ಜನ್ಯ ಮರುಕಳಿಸಬಾರದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಸಿಟಿ ರವಿ ಮನವಿ ಮಾಡಿದ್ದಾರೆ.
‘ಈ ಸಂಚಿನಲ್ಲಿ ಪೊಲೀಸ್ ಮಹಾ ನಿರ್ದೇಶಕ, ಪೊಲೀಸ್ ಆಯುಕ್ತ, ಎಸ್ಪಿ ಮತ್ತು ಅಧೀನ ಅಧಿಕಾರಿಗಳು ನೇರವಾಗಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನನಗಾಗಿರುವ ಅನ್ಯಾಯಕ್ಕೆ ₹1 ಕೋಟಿ ಪರಿಹಾರ ಕೊಡಬೇಕು. ಅದನ್ನು ತಪ್ಪಿತಸ್ಥರಿಂದಲೇ ವಸೂಲಿ ಮಾಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.
CT Ravi writes letter to Human rights, demands for protection. Complains against DK Shivakumar and Lakshami Hebbalkar.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm