ಬ್ರೇಕಿಂಗ್ ನ್ಯೂಸ್
06-01-25 02:03 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಇಬ್ಬರು ಮಕ್ಕಳನ್ನು ಕೊಂದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ಎಂವಿ 2ನೇ ಹಂತದಲ್ಲಿರುವ ಮನೆಯೊಂದರಲ್ಲಿ ನಡೆದಿದೆ.
ಮೃತರನ್ನು ಅನೂಪ್ (38), ಅವರ ಪತ್ನಿ ರಾಖಿ (35), ಮತ್ತು ಐದು ಹಾಗೂ 2 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸದಾಶಿವನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಮಕ್ಕಳಿಬ್ಬರಿಗೂ ವಿಷಪ್ರಾಶನ ಮಾಡಿದ ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಅಲಹಾಬಾದ್ ಮೂಲದ ಅನೂಪ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಕನ್ಸಲ್ಟೆಂಟ್ ಆಗಿ ಅನೂಪ್ ಕೆಲಸ ಮಾಡುತ್ತಿದ್ದರು.
ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಅನೂಪ್ ಮನೆಯಲ್ಲಿ ಮೂರು ಜನ ಮನೆ ಕೆಲಸ ಮಾಡುತ್ತಿದ್ದರು. ಮೊದಲ ಮಗುವಿಗೆ ಮಾನಸಿಕ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು.
ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗ್ಬೇಕು ಬೇಗ ಮನೆಗೆ ಬನ್ನಿ ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರು. ಹೀಗಾಗಿ ಇಂದು ಬೆಳಗ್ಗೆ ಕೆಲಸದವರು ಮನೆಗೆ ಬಂದಿದ್ದಾರೆ. ಭಾನುವಾರ ಸಹ ಪ್ಯಾಕಿಂಗ್ ಮಾಡಲು ಕೆಲಸದವರನ್ನ ಕರೆಸಿಕೊಂಡಿದ್ದರು.
ಮೂವರು ಕೆಲಸಗಾರರ ಪೈಕಿ ಇಬ್ಬರು ಅಡುಗೆ ಕೆಲಸ ಮಾಡುತಿದ್ರು, ಇನ್ನೊಬರು ಮಗು ನೋಡಿಕೊಳ್ಳುತ್ತಿದ್ರು. ಮೂವರಿಗೂ ತಿಂಗಳಿಗೆ 15 ಸಾವಿರ ರೂ. ಸಂಬಳ ಇತ್ತು. ಟೆಕ್ಕಿ ಕುಟುಂಬ ಆರ್ಥಿಕವಾಗಿ ಸದೃಢವಾಗಿತ್ತು. ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ಪೊಲೀಸರಿಗೆ ತಿಳಿಸಿದ್ದಾರೆ.
ಸದ್ಯ ಘಟನಾ ಸ್ಥಳದಲ್ಲಿ ಸದಾಶಿವನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ಬರುವ ನಿರೀಕ್ಷೆಯಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ.
A 38-year-old software engineer along with his wife ended their lives after allegedly killing their minor children aged five and two years at their residence in RMV 2nd stage in Bengaluru on January 6.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm