ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 07:57 pm
HK News Staffer
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm