ಬ್ರೇಕಿಂಗ್ ನ್ಯೂಸ್
10-01-25 02:44 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಇತ್ತೀಚಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ವಾರಕ್ಕೆ 70 ಗಂಟೆ ದುಡಿಯಬೇಕೆಂದು ಹೇಳಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅದೇ ಧಾಟಿಯಲ್ಲಿ ದೇಶದ ಮತ್ತೊಂದು ದೈತ್ಯ ಕಂಪನಿ ಲಾರ್ಸನ್ ಆಂಡ್ ಟರ್ಬೊ (L&T) ಅಧ್ಯಕ್ಷ ಸುಬ್ರಹ್ಮಣ್ಯನ್ ಮಾತನಾಡಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಎಲ್&ಟಿ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್, ವಾರಕ್ಕೊಮ್ಮೆ ಭಾನುವಾರ ಕೆಲಸಕ್ಕೆ ರಜೆ ನೀಡಿ, ನಿಮ್ಮಿಂದ ಕೆಲಸ ತೆಗೆಸಲು ಸಾಧ್ಯವಾಗದೆ ಇರುವುದಕ್ಕೆ ಬೇಸರವಾಗುತ್ತಿದೆ ಎಂದು ಸಂಸ್ಥೆಯ ಆಂತರಿಕ ಸಭೆಯಲ್ಲಿ ನೀಡಿರುವ ಹೇಳಿಕೆ ಕಾರ್ಪೊರೇಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾರ್ಪೊರೇಟ್ ವಲಯದ ಉದ್ಯೋಗಸ್ಥರು ಸುಬ್ರಹ್ಮಣ್ಯನ್ ಅವರ ಹೇಳಿಕೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಂಸ್ಥೆಯ ಆಂತರಿಕ ಸಭೆಯಲ್ಲಿ ಶನಿವಾರವನ್ನು ಕಡ್ಡಾಯ ಕೆಲಸದ ದಿನವನ್ನಾಗಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಸುಬ್ರಹ್ಮಣ್ಯನ್, ನಿಮ್ಮನ್ನು ಭಾನುವಾರಗಳಂದು ಕೆಲಸದಲ್ಲಿ ತೊಡಗಿಸದೇ ಇರುವುದಕ್ಕೆ ವಿಷಾದವಿದೆ. ಭಾನುವಾರವೂ ಕೆಲಸ ಮಾಡಿಸುವಂತಾದರೆ ಅದು ನನಗೆ ಹೆಚ್ಚಿನ ಖುಷಿ ಕೊಡುತ್ತದೆ. ಏಕೆಂದರೆ ನಾನೂ ಭಾನುವಾರ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಭಾನುವಾರಗಳಂದು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ? ಎಷ್ಟು ಸಮಯದ ವರೆಗೆ ನಿಮ್ಮ ಹೆಂಡತಿಯನ್ನು ನೋಡುತ್ತಾ ಕುಳಿತಿರುತ್ತೀರಿ? ಹೆಂಡತಿಯರೂ ಅಷ್ಟೇ ಎಷ್ಟು ಅಂತ ಗಂಡನ ಮುಖ ನೋಡುತ್ತಾ ಕುಳಿತಿರಲು ಸಾಧ್ಯ? ಅದರ ಬದಲು ಕಚೇರಿಗೆ ಬಂದು ಕೆಲಸದಲ್ಲಿ ತೊಡಗಬಹುದು ಎಂದು ತನ್ನ ನೌಕರರಿಗೆ ಕರೆ ನೀಡಿದ್ದಾರೆ.
ತಮ್ಮ ಹೇಳಿಕೆಯನ್ನು ಸಮರ್ಥಿಸಲು ಚೀನಾದ ಉದಾಹರಣೆ ನೀಡಿರುವ ಸುಬ್ರಹ್ಮಣ್ಯನ್, ಅಮೇರಿಕಾವನ್ನು ಹಿಂದಿಕ್ಕುವುದಕ್ಕೆ ಚೀನಾಗೆ ಸಾಧ್ಯವಾಗಿರುವುದು ಅಲ್ಲಿನ ಜನರ ತೀವ್ರವಾದ ಕೆಲಸದ ಸಂಸ್ಕೃತಿ. ಚೀನಾದವರು ವಾರಕ್ಕೆ 90 ಗಂಟೆ ಕೆಲಸ ಮಾಡುತ್ತಾರೆ, ಅಮೇರಿಕನ್ನರು ವಾರಕ್ಕೆ 50 ಗಂಟೆಯಷ್ಟೇ ಕೆಲಸ ಮಾಡುತ್ತಾರೆ. ನಮ್ಮ ಸಂಸ್ಥೆಯ ನೌಕರರೂ ಸಹ ಇದೇ ರೀತಿಯಲ್ಲಿ ವಾರಕ್ಕೆ 90 ಗಂಟೆ ಕೆಲಸ ಮಾಡುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲು ನಾವು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕಿದೆ ಎಂದು ಸುಬ್ರಹ್ಮಣ್ಯನ್ ಅಭಿಪ್ರಾಯಪಟ್ಟಿದ್ದಾರೆ.
In a now-viral video, Larsen & Toubro Chairman SN Subrahmanyan has ignited a storm of criticism for suggesting employees should work 90 hours a week, including Sundays.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm