ಬ್ರೇಕಿಂಗ್ ನ್ಯೂಸ್
10-01-25 02:44 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಇತ್ತೀಚಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ವಾರಕ್ಕೆ 70 ಗಂಟೆ ದುಡಿಯಬೇಕೆಂದು ಹೇಳಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅದೇ ಧಾಟಿಯಲ್ಲಿ ದೇಶದ ಮತ್ತೊಂದು ದೈತ್ಯ ಕಂಪನಿ ಲಾರ್ಸನ್ ಆಂಡ್ ಟರ್ಬೊ (L&T) ಅಧ್ಯಕ್ಷ ಸುಬ್ರಹ್ಮಣ್ಯನ್ ಮಾತನಾಡಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಎಲ್&ಟಿ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್, ವಾರಕ್ಕೊಮ್ಮೆ ಭಾನುವಾರ ಕೆಲಸಕ್ಕೆ ರಜೆ ನೀಡಿ, ನಿಮ್ಮಿಂದ ಕೆಲಸ ತೆಗೆಸಲು ಸಾಧ್ಯವಾಗದೆ ಇರುವುದಕ್ಕೆ ಬೇಸರವಾಗುತ್ತಿದೆ ಎಂದು ಸಂಸ್ಥೆಯ ಆಂತರಿಕ ಸಭೆಯಲ್ಲಿ ನೀಡಿರುವ ಹೇಳಿಕೆ ಕಾರ್ಪೊರೇಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾರ್ಪೊರೇಟ್ ವಲಯದ ಉದ್ಯೋಗಸ್ಥರು ಸುಬ್ರಹ್ಮಣ್ಯನ್ ಅವರ ಹೇಳಿಕೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಂಸ್ಥೆಯ ಆಂತರಿಕ ಸಭೆಯಲ್ಲಿ ಶನಿವಾರವನ್ನು ಕಡ್ಡಾಯ ಕೆಲಸದ ದಿನವನ್ನಾಗಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಸುಬ್ರಹ್ಮಣ್ಯನ್, ನಿಮ್ಮನ್ನು ಭಾನುವಾರಗಳಂದು ಕೆಲಸದಲ್ಲಿ ತೊಡಗಿಸದೇ ಇರುವುದಕ್ಕೆ ವಿಷಾದವಿದೆ. ಭಾನುವಾರವೂ ಕೆಲಸ ಮಾಡಿಸುವಂತಾದರೆ ಅದು ನನಗೆ ಹೆಚ್ಚಿನ ಖುಷಿ ಕೊಡುತ್ತದೆ. ಏಕೆಂದರೆ ನಾನೂ ಭಾನುವಾರ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಭಾನುವಾರಗಳಂದು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ? ಎಷ್ಟು ಸಮಯದ ವರೆಗೆ ನಿಮ್ಮ ಹೆಂಡತಿಯನ್ನು ನೋಡುತ್ತಾ ಕುಳಿತಿರುತ್ತೀರಿ? ಹೆಂಡತಿಯರೂ ಅಷ್ಟೇ ಎಷ್ಟು ಅಂತ ಗಂಡನ ಮುಖ ನೋಡುತ್ತಾ ಕುಳಿತಿರಲು ಸಾಧ್ಯ? ಅದರ ಬದಲು ಕಚೇರಿಗೆ ಬಂದು ಕೆಲಸದಲ್ಲಿ ತೊಡಗಬಹುದು ಎಂದು ತನ್ನ ನೌಕರರಿಗೆ ಕರೆ ನೀಡಿದ್ದಾರೆ.
ತಮ್ಮ ಹೇಳಿಕೆಯನ್ನು ಸಮರ್ಥಿಸಲು ಚೀನಾದ ಉದಾಹರಣೆ ನೀಡಿರುವ ಸುಬ್ರಹ್ಮಣ್ಯನ್, ಅಮೇರಿಕಾವನ್ನು ಹಿಂದಿಕ್ಕುವುದಕ್ಕೆ ಚೀನಾಗೆ ಸಾಧ್ಯವಾಗಿರುವುದು ಅಲ್ಲಿನ ಜನರ ತೀವ್ರವಾದ ಕೆಲಸದ ಸಂಸ್ಕೃತಿ. ಚೀನಾದವರು ವಾರಕ್ಕೆ 90 ಗಂಟೆ ಕೆಲಸ ಮಾಡುತ್ತಾರೆ, ಅಮೇರಿಕನ್ನರು ವಾರಕ್ಕೆ 50 ಗಂಟೆಯಷ್ಟೇ ಕೆಲಸ ಮಾಡುತ್ತಾರೆ. ನಮ್ಮ ಸಂಸ್ಥೆಯ ನೌಕರರೂ ಸಹ ಇದೇ ರೀತಿಯಲ್ಲಿ ವಾರಕ್ಕೆ 90 ಗಂಟೆ ಕೆಲಸ ಮಾಡುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲು ನಾವು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕಿದೆ ಎಂದು ಸುಬ್ರಹ್ಮಣ್ಯನ್ ಅಭಿಪ್ರಾಯಪಟ್ಟಿದ್ದಾರೆ.
In a now-viral video, Larsen & Toubro Chairman SN Subrahmanyan has ignited a storm of criticism for suggesting employees should work 90 hours a week, including Sundays.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm