ಬ್ರೇಕಿಂಗ್ ನ್ಯೂಸ್
10-01-25 02:44 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಇತ್ತೀಚಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ವಾರಕ್ಕೆ 70 ಗಂಟೆ ದುಡಿಯಬೇಕೆಂದು ಹೇಳಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅದೇ ಧಾಟಿಯಲ್ಲಿ ದೇಶದ ಮತ್ತೊಂದು ದೈತ್ಯ ಕಂಪನಿ ಲಾರ್ಸನ್ ಆಂಡ್ ಟರ್ಬೊ (L&T) ಅಧ್ಯಕ್ಷ ಸುಬ್ರಹ್ಮಣ್ಯನ್ ಮಾತನಾಡಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಎಲ್&ಟಿ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್, ವಾರಕ್ಕೊಮ್ಮೆ ಭಾನುವಾರ ಕೆಲಸಕ್ಕೆ ರಜೆ ನೀಡಿ, ನಿಮ್ಮಿಂದ ಕೆಲಸ ತೆಗೆಸಲು ಸಾಧ್ಯವಾಗದೆ ಇರುವುದಕ್ಕೆ ಬೇಸರವಾಗುತ್ತಿದೆ ಎಂದು ಸಂಸ್ಥೆಯ ಆಂತರಿಕ ಸಭೆಯಲ್ಲಿ ನೀಡಿರುವ ಹೇಳಿಕೆ ಕಾರ್ಪೊರೇಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾರ್ಪೊರೇಟ್ ವಲಯದ ಉದ್ಯೋಗಸ್ಥರು ಸುಬ್ರಹ್ಮಣ್ಯನ್ ಅವರ ಹೇಳಿಕೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಂಸ್ಥೆಯ ಆಂತರಿಕ ಸಭೆಯಲ್ಲಿ ಶನಿವಾರವನ್ನು ಕಡ್ಡಾಯ ಕೆಲಸದ ದಿನವನ್ನಾಗಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಸುಬ್ರಹ್ಮಣ್ಯನ್, ನಿಮ್ಮನ್ನು ಭಾನುವಾರಗಳಂದು ಕೆಲಸದಲ್ಲಿ ತೊಡಗಿಸದೇ ಇರುವುದಕ್ಕೆ ವಿಷಾದವಿದೆ. ಭಾನುವಾರವೂ ಕೆಲಸ ಮಾಡಿಸುವಂತಾದರೆ ಅದು ನನಗೆ ಹೆಚ್ಚಿನ ಖುಷಿ ಕೊಡುತ್ತದೆ. ಏಕೆಂದರೆ ನಾನೂ ಭಾನುವಾರ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಭಾನುವಾರಗಳಂದು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ? ಎಷ್ಟು ಸಮಯದ ವರೆಗೆ ನಿಮ್ಮ ಹೆಂಡತಿಯನ್ನು ನೋಡುತ್ತಾ ಕುಳಿತಿರುತ್ತೀರಿ? ಹೆಂಡತಿಯರೂ ಅಷ್ಟೇ ಎಷ್ಟು ಅಂತ ಗಂಡನ ಮುಖ ನೋಡುತ್ತಾ ಕುಳಿತಿರಲು ಸಾಧ್ಯ? ಅದರ ಬದಲು ಕಚೇರಿಗೆ ಬಂದು ಕೆಲಸದಲ್ಲಿ ತೊಡಗಬಹುದು ಎಂದು ತನ್ನ ನೌಕರರಿಗೆ ಕರೆ ನೀಡಿದ್ದಾರೆ.
ತಮ್ಮ ಹೇಳಿಕೆಯನ್ನು ಸಮರ್ಥಿಸಲು ಚೀನಾದ ಉದಾಹರಣೆ ನೀಡಿರುವ ಸುಬ್ರಹ್ಮಣ್ಯನ್, ಅಮೇರಿಕಾವನ್ನು ಹಿಂದಿಕ್ಕುವುದಕ್ಕೆ ಚೀನಾಗೆ ಸಾಧ್ಯವಾಗಿರುವುದು ಅಲ್ಲಿನ ಜನರ ತೀವ್ರವಾದ ಕೆಲಸದ ಸಂಸ್ಕೃತಿ. ಚೀನಾದವರು ವಾರಕ್ಕೆ 90 ಗಂಟೆ ಕೆಲಸ ಮಾಡುತ್ತಾರೆ, ಅಮೇರಿಕನ್ನರು ವಾರಕ್ಕೆ 50 ಗಂಟೆಯಷ್ಟೇ ಕೆಲಸ ಮಾಡುತ್ತಾರೆ. ನಮ್ಮ ಸಂಸ್ಥೆಯ ನೌಕರರೂ ಸಹ ಇದೇ ರೀತಿಯಲ್ಲಿ ವಾರಕ್ಕೆ 90 ಗಂಟೆ ಕೆಲಸ ಮಾಡುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲು ನಾವು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕಿದೆ ಎಂದು ಸುಬ್ರಹ್ಮಣ್ಯನ್ ಅಭಿಪ್ರಾಯಪಟ್ಟಿದ್ದಾರೆ.
In a now-viral video, Larsen & Toubro Chairman SN Subrahmanyan has ignited a storm of criticism for suggesting employees should work 90 hours a week, including Sundays.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 07:57 pm
HK News Staffer
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm