ಬ್ರೇಕಿಂಗ್ ನ್ಯೂಸ್
11-01-25 02:11 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.11: ಅಶ್ಲೀಲ ನಿಂದನೆ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಲ್ಲಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಅನಾಮಧೇಯ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. “ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿ ಅವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ.
ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಪ್ರತಿಕ್ರಿಯೆ ನೀಡಿದ್ದು, ಅಪರಿಚಿತ ವ್ಯಕ್ತಿಗಳಿಂದ ಎಂಎಲ್ಸಿ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಇದಕ್ಕೆ ಸಂಬಂಧಿಸಿ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದು ಹೇಳಿದರು.
ಬೆದರಿಕೆ ಪತ್ರದಲ್ಲಿ ಏನಿದೆ?
15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ, ಹುಷಾರಾಗಿ ಇರಿ ಎಂದು ಬೆದರಿಕೆ ಒಡ್ಡಲಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19ರಂದು ಪರಿಷತ್ನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದರು. ಸಚಿವೆ ವಿರುದ್ಧ ಪರಿಷತ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡ ಜನರ ಗುಂಪೊಂದು ಸಿಟಿ ರವಿ ಮೇಲೆ ಹಲ್ಲೆ ನಡೆಸಲು ಯತ್ನಿಸಿತ್ತು. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
CT Ravi receives threatening letter from anonymous person of killing him. Ravi was taken into custody after an FIR (First Information Report) was registered against him, for allegedly using derogatory remarks against Congress leader and Karnataka cabinet minister Laxmi Hebbalkar in the Legislative Council earlier in the day.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm