ಬ್ರೇಕಿಂಗ್ ನ್ಯೂಸ್
14-01-25 03:36 pm HK News Desk ಕರ್ನಾಟಕ
ಹಾಸನ, ಜ 14: ಚಾಲಕನ ನಿಯಂತ್ರಣ ತಪ್ಪಿ ಹತ್ತು ಚಕ್ರದ ಲಾರಿಯೊಂದು ರಸ್ತೆ ಬದಿಯ ಕ್ಯಾಂಟಿನ್ಗೆ ನುಗ್ಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಗುಳಗಳಲೆ ಸಮೀಪ ನಡೆದಿದೆ.
ಬಾಳ್ಳುಪೇಟೆಯ ತೌಫಿಕ್ (27) ಹಾಗೂ ಚಿತ್ರದುರ್ಗ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಬಗ್ನಾರೆಡ್ಡಿ ಗ್ರಾಮದ ಈರೇಶ್ (60) ಮೃತ ದುರ್ದೈವಿಗಳು. ಹಾಸನದಿಂದ ಮಂಗಳೂರಿಗೆ ಗೂಡ್ಸ್ ತುಂಬಿಕೊಂಡು ತೆರಳುತ್ತಿದ್ದ ವಿಆರ್ಎಲ್ ಲಾಜಿಸ್ಟಿಕ್ಸ್ ಲಾರಿ ಅತಿ ವೇಗವಾಗಿ ಚಲಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮಹಮದ್ ಖಾದರ್ ಎಂಬವರ ಕ್ಯಾಂಟಿನ್ಗೆ ನುಗ್ಗಿದೆ.


ಕ್ಯಾಂಟಿನ್ ಬಳಿ ಹತ್ತಾರು ಮಂದಿ ಟೀ ಕುಡಿಯುತ್ತಿದ್ದು, ಇವರಲ್ಲಿ ಜೆಜೆಎಂ ಕೆಲಸ ಮಾಡಲು ಬಂದಿದ್ದ ವೀರೇಶ್ ಹಾಗೂ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ತೌಫಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟೀ ಅಂಗಡಿ ಮುಂದೆ ನಿಲ್ಲಿಸಿದ್ದ 2 ಬೈಕ್ಗಳು ಸಂಪೂರ್ಣ ಜಖಂಗೊಂಡಿವೆ. ಡಿಕ್ಕಿ ರಭಸಕ್ಕೆ ಕ್ಯಾಂಟಿನ್ ಸಂಪೂರ್ಣ ನೆಲಸಮವಾಗಿದೆ.
ಇಂದು ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದು ಮಕ್ಕಳು ಅಪಘಾತ ನಡೆದ ಸಮೀಪವೇ ಆಟವಾಡುತ್ತಿದ್ದರು. ಅಲ್ಲದೇ ಕ್ಯಾಂಟಿನ್ ಅಕ್ಕಪಕ್ಕದಲ್ಲೇ ವಾಸದ ಮನೆಗಳಿದ್ದು, ಕ್ಯಾಂಟಿನ್ ಡಿಕ್ಕಿ ಹೊಡೆದು ಲಾರಿ ಮಗುಚಿ ಬಿದ್ದಿದ್ದರಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Vrl truck accident at Hassan, two killed after truck rams into canteen. The deceased have been identified as Toufiq (27) and Eshwar (60).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm