ಬ್ರೇಕಿಂಗ್ ನ್ಯೂಸ್
15-01-25 06:37 pm Mangaluru Correspondent ಕರ್ನಾಟಕ
ಮಂಗಳೂರು, ಜ.16: ಜನವರಿ 18ರಿಂದ 22ರ ವರೆಗೆ ನಡೆಯಲಿರುವ ಮಂಗಳೂರು ಫುಡ್ ಫೆಸ್ಟಿವಲ್ ಗೆ ಸೋಶಿಯಲ್ ಮೀಡಿಯಾದಲ್ಲಿ ಹೆಸರು ಪಡೆದಿರುವ ನಾಗಪುರ ಮೂಲದ ಡಾಲಿ ಚಾಯ್ ವಾಲ ಆಗಮಿಸಲಿದ್ದಾರೆ.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜನವರಿ 18 ರಿಂದ 22ರ ವರೆಗೆ ಐದು ದಿನಗಳ ಕಾಲ ನಗರದಲ್ಲಿ “ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ’ ನಡೆಯಲಿದೆ. ಮೊದಲ ದಿನದ ಆಕರ್ಷಣೆಯಾಗಿ ಡಾಲಿ ಚಾಯ್ವಾಲ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಇವರ ವಿಡಿಯೋ ವೈರಲ್ ಆಗಿದ್ದು, ಜನವರಿ 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. “ಮಜಾ ಕರೇಂಗೆ .. ಚಾಯ್ ಪಿಯೇಂಗೆ’ ಎಂದು ಪೋಸ್ಟ್ ಮಾಡಿದ್ದಾರೆ.

ಡಾಲಿ ಚಾಯ್ ವಾಲಾ ತನ್ನ ವಿಶಿಷ್ಟ ಶೈಲಿಯ ಚಹಾ ತಯಾರಿಯಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದಾರೆ. ಕೋಲಿನಂತಿರುವ ಸಪೂರ ಶರೀರ, ಕೋಟ್ ಧರಿಸಿ ಕೊರಳಿಗೆ ಗೋಲ್ಡ್ ಚೈನ್ ಹಾಕಿ ಮಿರುಗುವ ಈತನ ಚುರುಕಿನ ನಡೆ, ಎತ್ತರದಿಂದ ಚಹಾವನ್ನು ಗ್ಲಾಸಿಗೆ ಸುರಿಯುವ ಶೈಲಿಗೆ ಜನ ಮಾರು ಹೋಗಿದ್ದಾರೆ. ಹಾಲಿನ ಪ್ಯಾಕೆಟ್ ಬಿಚ್ಚಿ ಒಲೆಯಲ್ಲಿಟ್ಟ ಟೀ ಪಾಟ್ ಗೆ ಸುರಿಯೋದು, ಅದನ್ನು ಎರಡು ಕೈಯಲ್ಲಿ ಗ್ರಾಹಕರಿಗೆ ಕೊಡುವುದು ಆಕರ್ಷಕ. ಇದೇ ಕಾರಣಕ್ಕೆ ಈತನ ವಿಡಿಯೋ ಫೇಸ್ಬುಕ್, ಇನ್ ಸ್ಟಾ ಸೇರಿದಂತೆ ಜಾಲತಾಣದಲ್ಲಿ ಸಕತ್ ಫೇಮಸ್.
ಅಂದಹಾಗೆ, ಈತನ ನಿಜ ಹೆಸರು ಸುನಿಲ್ ಪಟೇಲ್ ಅಂತ. ವಿಶಿಷ್ಟ ರೀತಿಯ ಚಹಾ ಸರ್ವ್ ನಿಂದಲೇ ಟ್ರೆಂಡ್ ಸೆಟ್ ಮಾಡಿರುವ ಈತ ಡಾಲಿ ಚಾಯ್ ವಾಲಾ ಎಂದೇ ಫೇಮಸ್ ಆಗಿದ್ದಾನೆ. ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಈತನ ಚಹಾಕ್ಕೆ ಫ್ಯಾನ್ ಆಗಿದ್ದಾರೆ. ಮೈಕ್ರೋಸಾಪ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಕೂಡ ಡಾಲಿ ಅವರ ಚಹಾ ಅಂಗಡಿಗೆ ಭೇಟಿ ಕೊಟ್ಟು ಚಹಾ ಕುಡಿದು ಪೋಸ್ಟ್ ಹಾಕಿದ್ದರು. ಇದರ ಬಳಿಕ ಡಾಲಿ ಚಾಯ್ವಾಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಇವರು ತನ್ನ ಚಹಾ ತಯಾರಿಸುವ ಬಗ್ಗೆ ಫೇಸ್ಬುಕ್ ವಿಡಿಯೋ ಹಾಕುತ್ತಿದ್ದು ಭಾರೀ ಸಂಖ್ಯೆಯಲ್ಲಿ ಜನರು ಫಾಲೋ ಮಾಡುತ್ತಿದ್ದಾರೆ.
Dolly Chaiwala from Nagpur to visit Mangalore on 18th of jan 22nd for food festival that will be held in the city.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm