ಬ್ರೇಕಿಂಗ್ ನ್ಯೂಸ್
18-01-25 05:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಸೈಟ್ ಪ್ರಕರಣ ಮತ್ತಷ್ಟು ಕೊರಳು ಸುತ್ತಿಕೊಂಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಕರಣ ಸಂಬಂಧಿಸಿ 300 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಆಸ್ತಿ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇಡಿ ಮಾಹಿತಿ ಪ್ರಕಾರ, ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವ 142 ಸ್ಥಿರಾಸ್ತಿಗಳ ಒಟ್ಟು ಮೌಲ್ಯ 300 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ.
ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇಡಿ ಅಧಿಕಾರಿಗಳು ಕಳೆದ ನಾಲ್ಕು ತಿಂಗಳಿನಿಂದ ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟರಾಗಿ ಕೆಲಸ ಮಾಡುವವರ ಹೆಸರಿನಲ್ಲಿ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಸ್ನೇಹಮಯಿ ಕೃಷ್ಣ ದೂರಿನಂತೆ ಇಡಿ ಎಂಟ್ರಿಯಾಗಿದ್ದು ಈಗ ಅಕ್ರಮವೆಂದು ಗುರುತಿಸಲ್ಪಟ್ಟ ಆಸ್ತಿಯನ್ನ ಜಪ್ತಿ ಮಾಡಿದೆ.
ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್ಗಳಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಇಡಿ ಹೇಳಿದೆ. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳನ್ನು ಪಡೆಯಲು ರಾಜಕೀಯ ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
The Enforcement Directorate (ED) has attached 142 immovable properties having a market value of ₹300 crore in connection with the Mysuru Urban Development Authority (MUDA) case against Karnataka Chief Minister Siddaramaiah, and others.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm