ಬ್ರೇಕಿಂಗ್ ನ್ಯೂಸ್
19-01-25 08:30 pm Bangalore Correspondent ಕರ್ನಾಟಕ
ಬೆಂಗಳೂರು, ಜ.19: ಕೇಸರಿ ಮನೆಯಲ್ಲಿನ ಬಣ ಬಡಿದಾಟಕ್ಕೆ ಮೇಜರ್ ಹೊಸ ಟ್ವಿಸ್ಟ್ ಸಿಕ್ಕಿದ್ದು, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಸ್ವತಃ ಅವರೇ ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಯತ್ನಾಳ್ ಮತ್ತು ರಮೇಶ ಜಾರಕಿಹೊಳಿ ಬಹಿರಂಗ ಕೂಗು ಹಾಕುತ್ತಿರುವಾಗಲೇ ವಿಜಯೇಂದ್ರ ತಂಡದಲ್ಲಿ ಎರಡನೇ ಸ್ಥಾನದಲ್ಲಿದ್ದ ಸುನಿಲ್ ಕುಮಾರ್ ಭಿನ್ನ ರಾಗ ಹಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಕರಾವಳಿ ಮೂಲದ ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಹುದ್ದೆ ತೆರವಾದ ಕೂಡಲೇ ಹೈಕಮಾಂಡ್ ವಿಜಯೇಂದ್ರ ಅವರಿಗೆ ಪಟ್ಟ ಕಟ್ಟಿತ್ತು. ಆ ಸಂದರ್ಭದಲ್ಲಿ ಸುನಿಲ್ ಕುಮಾರ್ ಕೂಡ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿ ಆಗಿದ್ದರು. ಆದರೆ ವಿಜಯೇಂದ್ರ ತಂಡದಲ್ಲಿ ಸುನಿಲ್ ಮಹತ್ವದ ಸ್ಥಾನ ಅಲಂಕರಿಸಿದ್ದರು. ಇದೀಗ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಒಂದು ವರ್ಷ ಪೂರೈಸುತ್ತಿದ್ದಂತೆ ಸುನಿಲ್ ಭಿನ್ನ ನಡೆ ಇಟ್ಟಿದ್ದಾರೆ.
ಎರಡು ದಿನಗಳ ಹಿಂದಷ್ಟೇ ರಾಜ್ಯಕ್ಕೆ ಬಂದಿದ್ದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ಇತ್ತೀಚೆಗೆ ಸಚಿವ ಪ್ರಹ್ಲಾದ ಜೋಷಿ ಕೂಡ ಎಲ್ಲ ಪದಾಧಿಕಾರಿ ಸ್ಥಾನಕ್ಕೂ ಕಾಲ ಕಾಲಕ್ಕೆ ಚುನಾವಣೆ ನಡೆಸಲಾಗುವುದು ಎಂದಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯೋದು ಪಕ್ಕಾ ಆಗಿದೆ. ಇದರ ನಡುವೆಯೇ, ಸುನಿಲ್ ಕುಮಾರ್ ತಮ್ಮನ್ನು ಹುದ್ದೆಯಿಂದ ಹೊರಗಿಡಲು ಮನವಿ ಮಾಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಾರೆಯೇ ಎಂಬ ಕುತೂಹಲದ ನೋಟ ಬೀರುವಂತಾಗಿದೆ.
ಇದೇ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡೆದ್ದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ್ ಜಾರಕಿಹೊಳಿ ಬಣದ ನಾಯಕರು ನೇರ ಠಕ್ಕರ್ ನೀಡುತ್ತಿದ್ದಾರೆ. ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸುತ್ತಿದ್ದಾರೆ. ಆಮೂಲಕ ರಾಜ್ಯಾಧ್ಯಕ್ಷ ಹುದ್ದೆಯ ಮೇಲೆ ಚುನಾವಣೆ ನಡೆದರೆ, ಯತ್ನಾಳ್ ಅವರನ್ನೇ ಅಭ್ಯರ್ಥಿಯಾಗಿಸಲು ಚಿಂತನೆ ನಡೆಸಿದ್ದಾರೆ.
ಇತ್ತ ಸುನಿಲ್ ಕುಮಾರ್ ಮೌನ ತಾಳಿದರೆ ಅಥವಾ ಯತ್ನಾಳ್ ಬಣಕ್ಕೆ ಪರೋಕ್ಷ ಬೆಂಬಲ ನೀಡಿದರೂ, ಫಲಿತಾಂಶ ಬದಲಾಗಬಹುದು ಎನ್ನುವ ಲೆಕ್ಕಾಚಾರ ಅವರಲ್ಲಿ ಇರುವಂತಿದೆ. ಈ ಬಗ್ಗೆ ಯತ್ನಾಳ ಬಣದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರುವಾಗಲೇ ಸುನಿಲ್ ತಮ್ಮನ್ನು ಸಂಘಟನಾ ಕಾರ್ಯದಿಂದ ಹೊರಗಿಡಲು ಮನವಿ ಮಾಡಿದ್ದಾರೆ. ಆಮೂಲಕ ವಿಜಯೇಂದ್ರ ನಾಯಕತ್ವದ ಬಗ್ಗೆ ಪರೋಕ್ಷ ಅಸಮ್ಮತಿ ತೋರಿದಂತೆ ಕಾಣುತ್ತಿದೆ.
Amid growing factionalism within the Karnataka BJP, Karkala MLA V. Sunil Kumar has reportedly requested to be relieved from his position as the party's state general secretary. According to sources, Sunil Kumar has made a verbal appeal to the party high command, asking to be relieved of his responsibilities as the general secretary.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm