ಬ್ರೇಕಿಂಗ್ ನ್ಯೂಸ್
20-01-25 04:24 pm HK News Desk ಕರ್ನಾಟಕ
ಹಾಸನ, ಜ.20: ಆನ್ಲೈನ್ ಗೇಮ್ ನಲ್ಲಿ ಹಣ ಕಳಕೊಂಡು ಬೇಸತ್ತ ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಲಾಡ್ಜ್ನಲ್ಲಿ ನಡೆದಿದೆ.
ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದ ಉಮೇಶ್ ಎಂಬುವವರ ಒಬ್ಬನೇ ಪುತ್ರ ರಾಕೇಶ್ಗೌಡ(25) ಆತ್ಮಹತ್ಯೆಗೆ ಶರಣಾದ ಯುವಕ. ತೀರ್ಥಹಳ್ಳಿಯ ಸ್ಪಂದನಾ ಸ್ಪೂರ್ತಿ ಫೈನಾನ್ಸ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಗೌಡ, ಕರ್ನಾಟಕ ರಕ್ಷಣಾ ವೇದಿಕೆ ಬೇಲೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಎರಡು ವರ್ಷದಿಂದ ಆನ್ಲೈನ್ ಗೇಮ್ ಆಡಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಆ ಹಣವನ್ನು ತೀರಿಸಲು ನನ್ನಿಂದ ಆಗುತ್ತಿಲ್ಲ. ಕೊನೆಯದಾಗಿ ಈ ನಿರ್ಧಾರ ಮಾಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ, ಅಮ್ಮ ನನ್ನನ್ನು ಕ್ಷಮಿಸಿಬಿಡು. ಆನ್ಲೈನ್ ಗೇಮ್ನಿಂದಾಗಿ ಫೈನಾನ್ಸ್ನಲ್ಲಿ ಒಂದು ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೇನೆ ಎಂದು ಚೀಟಿ ಬರೆದಿಟ್ಟಿದ್ದಾನೆ.
ಆ ಹಣವನ್ನು ನಮ್ಮ ತಾಯಿಯ ಬಳಿ ಕೇಳಬಾರದು. ನನ್ನ ಸಾವಿನ ಸುದ್ದಿಯನ್ನು ನೇರವಾಗಿ ನನ್ನ ತಾಯಿಗೆ ಹೇಳಬೇಡಿ. ನಾನು ಸಾವಿನ ನಂತರ ನನ್ನ ಕಣ್ಣನ್ನು ದಾನ ಮಾಡಿ. ಬಸವರಾಜು ಅವರ ಹತ್ತಿರ ಐವತ್ತು ಸಾವಿರ ಸಾಲ ಮಾಡಿದ್ದೇನೆ, ನಿಮಗೆ ಕೊಡಲು ಆಗಲಿಲ್ಲ ಕ್ಷಮಿಸಿ. ನನ್ನ ಬೈಕ್ ಮಾರಟವಾದರೆ ಹಣ ತಲುಪುತ್ತದೆ. ನನ್ನ ಶವವನ್ನು ಚೀಕನಹಳ್ಳಿಗೆ ತೆಗೆದುಕೊಂಡು ಹೋಗಬೇಡಿ, ಬೇಲೂರು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ. ಅಮ್ಮ, ಕುಟುಂಬಸ್ಥರೇ ನನ್ನನ್ನು ಕ್ಷಮಿಸಿಬಿಡಿ I MISS YOU AMMA.. ನನ್ನ ಅಂತಿಮ ದರ್ಶನಕ್ಕೆ ಬೇಲೂರು ಶಾಸಕರು ಬರಬೇಕು. ಆನ್ಲೈನ್ ಗೇಮ್ ನನ್ನ ಜೀವನವನ್ನು ತೆಗೆದುಬಿಡ್ತು ಎಂದು ನೋವು ಹೇಳಿಕೊಂಡಿದ್ದಾನೆ.
25 year old youth commits suicide after losing money in online game after huge loan in Hassan. The Deceased has been identified as Ramesh Gowda. He was working at finance company.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm