ಬ್ರೇಕಿಂಗ್ ನ್ಯೂಸ್
23-01-25 05:15 pm Bangalore Correspondent ಕರ್ನಾಟಕ
ಬೆಂಗಳೂರು, ಜ.23: ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ಮಾಡಿ ಕಾನೂನು ಕೈಗೆತ್ತಿಕೊಂಡ ಪ್ರಕರಣದಲ್ಲಿ ರಾಮನಗರದಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ಶ್ರೀರಾಮ ಸೇನೆ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಕೆಲಸ ಆಗ್ತಿದೆ. ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ ಮಾಡಬೇಡಿ. ಯಾರಿಗೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರವಿಲ್ಲ. ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಶ್ರೀರಾಮ ಸೇನೆ ಹೆಸರಲ್ಲಿ ಇಂತಹ ದಾಂಧಲೆ ಮಾಡುವುದು ಸರಿಯಲ್ಲ. ಏನಾದರೂ ಅಕ್ರಮ ನಡೆಯುತ್ತಿದ್ದರೆ ಪೊಲೀಸರ ಗಮನಕ್ಕೆ ತಂದು ದೂರು ನೀಡಬೇಕು. ಇವರೇ ನುಗ್ಗಿ ದಾಂಧಲೆ ಮಾಡಿ ಗೂಂಡಾಗಿರಿ ಮಾಡುವುದಲ್ಲ. ಕಾನೂನು ಸುವ್ಯವಸ್ಥೆಯನ್ನ ಎಲ್ಲರೂ ಪಾಲಿಸಬೇಕು. ಇಂಥವರ ಮೇಲೆ ಕಟ್ಟುನಿಟ್ಟಾದ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ದೇವರ ಹೆಸರು ಇಟ್ಟುಕೊಂಡು ಇಂತಹ ಕೃತ್ಯ ಮಾಡೋದು ರಾಮನಿಗೆ ಅಗೌರವ. ಹಿಂದೂ ಸಂಘಟನೆಗಳು ಕೂಡಾ ಇದನ್ನ ಖಂಡಿಸಬೇಕು. ನೈತಿಕ ಪೊಲೀಸ್ ಗಿರಿ ಮಾಡಿ ಕಾನೂನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕ್ರಮ ವಹಿಸುತ್ತೇವೆ. ಈ ರೀತಿ ಮಾಡಿಕೊಂಡು ಹೋದರೆ ಮುಂದೆ ಮಂಗಳೂರಿನ ಅಭಿವೃದ್ಧಿಗೆ ಹಿನ್ನೆಡೆಯಾಗಲಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಆಗ್ತಿದೆ. ಕೆಲವು ಸಂಘಟನೆಗಳು ಗಲಾಟೆ ಮಾಡಿ ಗೊಂದಲ ಸೃಷ್ಠಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡ್ತಿದ್ದಾರೆ ಎಂದರು.
ಕಾನೂನು ಕ್ರಮಕ್ಕೆ ಸೂಚಿಸಿದ್ದೇನೆ; ಗೃಹ ಸಚಿವ
ಇದೇ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಯಾವ ಕಾರಣಕ್ಕೆ ದಾಳಿ ನಡೆದಿದೆಯೋ ಗೊತ್ತಿಲ್ಲ. ದಾಳಿ ಮಾಡಿದವರನ್ನು ತಕ್ಷಣ ಬಂಧಿಸಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಇಂತಹ ಕೃತ್ಯಗಳು ನಡೆಯಬಾರದು. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ದಾಳಿ ಮಾಡಿದವರು ಯಾರೆಂದು ಗುರುತಿಸಿ ಇಲಾಖೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ' ಎಂದರು.
'ಅನೈತಿಕ ಚಟುವಟಿಕೆ ಮಸಾಜ್ ಸೆಂಟರ್ಗಳಿದ್ದರೆ ಪೊಲೀಸ್ ದೂರು ಕೊಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಬದಲಾಗಿ ನಾವೇ ಕಾನೂನು ಕೈಗೆತ್ತಿಕೊಳ್ಳುತ್ತೇವೆ ಎನ್ನುವುದು ಸರಿಯಲ್ಲ. ಮಹಾನಗರ ಪಾಲಿಕೆ ಪರವಾನಗಿ ಕೊಟ್ಟಿರುತ್ತದೆ. ಈ ವೇಳೆ ನಿಯಮ ಪಾಲಿಸದಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
Attack on saloon in Mangalore, home minister Parameshwara orders for strict action. Also incharge minister Dinesh Gundu Rao slams ram sena activist that keeping gods name they are doing work that is against God.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm