ಬ್ರೇಕಿಂಗ್ ನ್ಯೂಸ್
24-01-25 02:48 pm Bangalore Correspondent ಕರ್ನಾಟಕ
ಬೆಂಗಳೂರು, ಜ.24: ಕಾಂಗ್ರೆಸ್ ಪಕ್ಷದಲ್ಲಿ ವಾಲ್ಮೀಕಿ ಹಾಗೂ ಎಸ್ಟಿ ಸಮುದಾಯದ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಪ್ರತಿಯಾಗಿ ಇನ್ನೊಬ್ಬ ನಾಯಕನನ್ನು ಬೆಳೆಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀರಾಮುಲು ಅವರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಮುಲು ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ, ಆದರೆ ನನ್ನ ಬಗ್ಗೆ ಆರೋಪ ಮಾಡಿ ಹೋಗೋದು ಬೇಡ. ನಾನು 40 ವರ್ಷಗಳಲ್ಲಿ ಅವರಿಗೆ ಮಾಡಿರುವ ಸಹಾಯವನ್ನು ಬೂದಿಯಲ್ಲಿ ಹಾಕಿ, ಎಲ್ಲವನ್ನು ಮರೆತು ಹೋಗುವುದಾದರೆ ಹೋಗಲಿ ಎಂದಿದ್ದಾರೆ.

ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿಯನ್ನು ಮಣಿಸಲು ಹೇಗಾದರೂ ಮಾಡಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಕರೆದುಕೊಳ್ಳುವ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ ಎಂಬುದು ಬಳ್ಳಾರಿ ಜನ ಮಾತನಾಡಿಕೊಳ್ಳತ್ತಿದ್ದಾರೆ. ಪಕ್ಷ ಬಿಡೋದು ಅವರ ವೈಯಕ್ತಿಕ ವಿಚಾರ. ಹೋಗುವುದಾದರೆ ಅವರು ಹೋಗಲಿ. ಪಕ್ಷ ಬಿಟ್ಟು ಹೋಗುವಾಗ ನನ್ನ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ರೆಡ್ಡಿ ತಿರುಗೇಟು ನೀಡಿದರು. ನಾನು ಭಗವಂತನನ್ನು ನಂಬಿದ್ದೇನೆ, ಕರ್ಮ ಯಾರನ್ನು ಬಿಡುವುದಿಲ್ಲ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ವಿಷಯವನ್ನು ಸವಿಸ್ತಾರವಾಗಿ ಹೇಳುತ್ತೇನೆ ಎಂದಿದ್ದಾರೆ.
ಪಕ್ಷ ಯಾರ ಪರವಾಗಿ ಕೆಲಸ ಮಾಡು ಎಂದು ಸೂಚಿಸುತ್ತದೋ ಅವರ ಪರ ಕೆಲಸ ಮಾಡುತ್ತೇನೆ. ನನಗೆ ನಾಳೆ ರಾಮುಲು ಪರವಾಗಿ ಕೆಲಸ ಮಾಡಲು ಹೇಳಿದರೆ ನಾನು ಕೆಲಸ ಮಾಡ್ತೇನೆ. ವಿಜಯೇಂದ್ರ ಅವರು ಬಿಜೆಪಿ ರಾಜ್ಯ ಅಧ್ಯಕ್ಷ ಅಂತ ತೀರ್ಮಾನ ಮಾಡಿದರೆ ನಾವು ಒಪ್ಪಲೇಬೇಕು. ಮೋದಿ ಪ್ರಧಾನಿ ಅಭ್ಯರ್ಥಿ ಅಂತ ಹೇಳಿದಾಗ, ಅಡ್ವಾಣಿ ಸಹಿತ ಎಲ್ಲರೂ ಕೆಲಸ ಮಾಡಿದ್ದಾರೆ. ಹಾಗೆ ವಿಜಯೇಂದ್ರ ಅವರನ್ನು ಅಧ್ಯಕ್ಷ ಅಂದ ಮೇಲೆ ನಾವು ಒಪ್ಪಬೇಕು. ಅದು ನಾಲ್ಕು ಜನರಿಗೆ ಇಷ್ಟ ಇಲ್ಲ ಅಂದ್ರೆ, ನೀವು ಅವರ ಜೊತೆಗೆ ಹೋಗಿ ನಿಂತರೆ ಸರಿಯಾಗಲ್ಲ ಎಂದು ಹೇಳಿದರು.
MLA Janardhana Reddy has accused Deputy Chief Minister D.K. Shivakumar of promoting Sriramulu to replace Valmiki and ST community leader Satish Jarkiholi in the Congress party.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm