ಬ್ರೇಕಿಂಗ್ ನ್ಯೂಸ್
29-01-25 11:13 am Bangalore Correspondent ಕರ್ನಾಟಕ
ಬೆಂಗಳೂರು, ಜ.29: ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಗೊಲ್ಲರಹಟ್ಟಿಯ ನಿವಾಸಿ ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ಈತ ತನ್ನ 9 ವರ್ಷದ ತಂಗಿಯ ಮುಂದೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.
ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದು ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಸೊಂಟದ ಉಡದಾರ ಫ್ಯಾನ್ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನಿದ್ದಳು. ಬಾಲಕ ಕೆಳಗೆ ಬಿದ್ದು ಗಾಯಗೊಂಡಿದ್ದು ಅಷ್ಟರಲ್ಲಿ ತಾಯಿ ಮನೆಗೆ ಬಂದಿದ್ದರು. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
13 year old boy commits suicide over mobile use in Bangalore. The deceased has been identified as Dhruva. He hang himself while his little sister was in the same room.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm