ಬ್ರೇಕಿಂಗ್ ನ್ಯೂಸ್
29-01-25 02:19 pm Bangalore Correspondent ಕರ್ನಾಟಕ
ಬೆಂಗಳೂರು, ಜ.29: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಕನ್ನಡಿಗರು ಕೂಡ ಸಿಲುಕಿಕೊಂಡಿದ್ದಾರೆ. ಬೆಳಗಾವಿಯಿಂದ ಖಾಸಗಿ ಬಸ್ನಲ್ಲಿ ಮೂವತ್ತು ಜನರ ತಂಡ ಪ್ರಯಾಗರಾಜ್ಗೆ ಹೋಗಿತ್ತು. ಈ ಪೈಕಿ ಕಾಲ್ತುಳಿತದ ಬಳಿಕ ಐವರು ನಾಪತ್ತೆ ಆಗಿದ್ದಾರೆ.
ಬೆಳಗಾವಿ ನಗರದ ಶೆಟ್ಟಿಗಲ್ಲಿಯ ದಂಪತಿ ಅರುಣ್ ಕೋಪರ್ಡೆ, ಕಾಂಚನಾ ಕೋಪರ್ಡೆ ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ. ಚದುರಿ ಹೋಗಿದ್ದ ಇಬ್ಬರಿಗೂ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಲ್ತುಳಿತದ ಭೀಕರತೆಯನ್ನು ಕನ್ನಡತಿ ಸರೋಜಿನಿ ಎಂಬಾಕೆ ಬಿಚ್ಚಿಟ್ಟಿದ್ದಾರೆ. ಎರಡು ಬಸ್ನಲ್ಲಿ 60 ಜನ ಬಂದಿದ್ದೆವು. 9 ಜನ ಸ್ನಾನ ಮಾಡುವುದಕ್ಕೆ ಹೋದಾಗ ಕಾಲ್ತುಳಿತ ಸಂಭವಿಸಿತು. ತಪ್ಪಿಸಿಕೊಳ್ಳಲು ನಮಗೆ ಯಾವುದೇ ದಾರಿಯೇ ಸಿಕ್ಕಿಲ್ಲ ಎಂದಿದ್ದಾರೆ.
ಬೆಂಗಳೂರಿನ ಉಮೇಶ್ ಈ ಬಗ್ಗೆ ಮಾತನಾಡಿದ್ದು, ಗಾಯ ಆಗಿದೆ, ಆಸ್ಪತ್ರೆಗೆ ಹೋಗಿ ಬಂದಿದ್ದೇನೆ. 22 ಕಿ.ಮೀ ನಡೆದುಕೊಂಡು ಹೋಗಿದ್ದೇನೆ. ಭಕ್ತರಿಗೆ ಯಾವುದೇ ವಾಹನದ ವ್ಯವಸ್ಥೆ ಮಾಡಿಲ್ಲ ಎಂದು ಅಳಲು ಹೇಳಿಕೊಂಡಿದ್ದಾರೆ.
ಬೆಳಗಾವಿಯಿಂದ ಒಟ್ಟು 30 ಜನರು ಕುಂಭಮೇಳಕ್ಕೆ ಹೋಗಿದ್ದರು. ಕಾಂಚನಾ ಕೋರ್ಪಡೆ ಮಾತ್ರ ಸಂಪರ್ಕದಲ್ಲಿದ್ದು, ಅರುಣ್ ಕೋಪರ್ಡೆ ಪುತ್ರನ ಸಂಪರ್ಕಕ್ಕೆ ಸಿಕ್ಕಿಲ್ಲ. ತಂದೆಯ ಮೊಬೈಲ್ ಮಿಸ್ ಆಗಿರಬಹುದು ಎಂದು ಪುತ್ರ ಓಂಕಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಅನೇಕ ಮಂಡಿ ವಿವಿಧ ಗುಂಪುಗಳಾಗಿ ಪ್ರಯಾಗ್ರಾಜ್ಗೆ ತೆರಳಿದ್ದಾರೆ. ಕೆಲವರು ರೈಲು ಮತ್ತು ವಿಮಾನದಲ್ಲಿ ಪ್ರಯಾಣಿಸಿದರೆ ಕೆಲವರು ಮಿನಿ ಬಸ್ ಮತ್ತು ಇತರ ವಾಹನಗಳಲ್ಲಿ ತೆರಳಿದ್ದರು. ಸಂಪರ್ಕಕ್ಕೆ ಸಿಗದ ಸಂಬಂಧಿಕರ ಬಗ್ಗೆ ಊರಿನಲ್ಲಿದ್ದವರು ಆತಂಕಗೊಂಡಿದ್ದಾರೆ.
ಜನವರಿ 28 ರ ಮಧ್ಯರಾತ್ರಿಯ ನಂತರ ಪ್ರಯಾಗ್ರಾಜ್ನ ಸಂಗಮ್ ದಂಡೆಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ ಎಷ್ಟು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದರ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ನೀಡಿಲ್ಲ.
Four people -- two women and two girls from Belagavi-- are said to have suffered injuries in the stampede while on their way for the bathing ritual on the occasion of ‘Mauni Amavasya’ at the Mahakumbh at Prayagraj in Uttar Pradesh on Wednesday.
02-05-25 10:52 am
Bangalore Correspondent
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 12:23 pm
Mangalore Correspondent
Suhas Shetty Murder, Bajpe, Mangalore: ಟಾರ್ಗೆ...
02-05-25 03:52 am
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm