ಬ್ರೇಕಿಂಗ್ ನ್ಯೂಸ್
29-01-25 09:46 pm Bangalore Correspondent ಕರ್ನಾಟಕ
ಬೆಂಗಳೂರು, ಜ.29: ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವ ಹಾಳಾಗಿ ಹೋಗಿದೆ. ವಿಜಯೇಂದ್ರ ಅವರೇ ಎಲ್ಲವನ್ನೂ ನಿರ್ಧರಿಸುತ್ತಿದ್ದಾರೆ. ಯಡಿಯೂರಪ್ಪ ಅವರಿಗಿಂತಲೂ ಇವರೇ ದೊಡ್ಡವರಾಗಿದ್ದಾರೆ. ಇಷ್ಟು ದಿನ ಸಹಿಸಿಕೊಂಡೆ, ಇನ್ನು ಮುಂದೆ ಇರಕ್ಕಾಗಲ್ಲ. ವಿಜಯೇಂದ್ರ ವಿರುದ್ಧ ಯುದ್ಧ ಸಾರುತ್ತೇನೆ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಗುಡುಗಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ತಮ್ಮ ಮಗನನ್ನು ರಕ್ಷಣೆ ಮಾಡುತ್ತಿದ್ದಾರೆ. ಪಕ್ಷದ ಬಗ್ಗೆ ಗಮನ ಹೊಂದಿಲ್ಲ. ಶೀಘ್ರದಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ. ಎಲ್ಲವನ್ನೂ ಹೇಳುತ್ತೇನೆ. ದೆಹಲಿಗೆ ಹೋಗಿ ಅಮಿತ್ ಶಾ, ಜೆ.ಪಿ ನಡ್ಡಾ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತೇನೆ. ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ, ನಾಯಕರ ಅಸಮಾಧಾನ, ನಾಯಕತ್ವದ ಸಮಸ್ಯೆಗಳನ್ನು ಹೇಳುತ್ತೇನೆ ಎಂದರು.
ಇಷ್ಟು ದಿನ ಸಹಿಸಿಕೊಂಡೆ, ಆದರೆ ಇನ್ನು ಮುಂದೆ ಯುದ್ಧ ಸಾರಲಿದ್ದೇನೆ. ವಿಜಯೇಂದ್ರ ಅವರ ಧೋರಣೆಗೆ ನನ್ನ ತೀವ್ರ ವಿರೋಧ ಇದೆ. ಈಗಲೇ ಇವರ ಅಹಂಕಾರಕ್ಕೆ ಕಡಿವಾಣ ಹಾಕಬೇಕು, ಇಲ್ಲವಾದರೆ ಅವರನ್ನು ಬದಲಾಯಿಸಬೇಕು ಎಂದರು.
ಪಕ್ಷ ಬಿಡುತ್ತೀರಾ ಎಂಬ ಪ್ರಶ್ನೆಗೆ, ರಾಷ್ಟ್ರೀಯ ನಾಯಕರ ಜೊತೆಗೆ ಮಾತಾಡಬೇಕು, ಪಕ್ಷ ಬಿಡುವ ವಿಚಾರವನ್ನು ಈಗಲೇ ನಿರ್ಧರಿಸಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಯಾವಾಗ ಏನಾಗುತ್ತದೋ ಗೊತ್ತಿಲ್ಲ, ಏನಾದರೂ ಸಂಭವಿಸಬಹುದು ಎನ್ನುವ ಮೂಲಕ ಹೊರಗೆ ಕಾಲಿಡುತ್ತಿರುವ ಸೂಚನೆ ನೀಡಿದರು.
"ವಿಜಯೇಂದ್ರ ಅವರು ಸಣ್ಣ ವಯಸ್ಸಿನಲ್ಲಿ ರಾಜ್ಯಾಧ್ಯಕ್ಷರಾಗಿದ್ದಾರೆ, ಒಂದು ವರ್ಷದಲ್ಲಿ ಅನುಭವ ಪಡೆಯುತ್ತಾರೆ ಎಂದೆನಿಸಿತ್ತು. ಆದರೆ ಬದಲಾವಣೆ ಕಂಡು ಬಂದಿಲ್ಲ. ಪಕ್ಷದಲ್ಲಿ ಪ್ರಜಾಪ್ರಭುತ್ವವಿಲ್ಲ, ನೇಮಕಾತಿಗಳನ್ನು ಏಕಚಕ್ರಾಧಿಪತ್ಯದಂತೆ ಮಾಡಲಾಗುತ್ತಿದೆ. 100% ಶಾಸಕರು ನಮ್ಮ ಬೆಂಬಲದಲ್ಲಿದ್ದಾರೆ, ಆದರೂ ನಾಯಕತ್ವ ತೀರ್ಮಾನಗಳು ಆಂತರಿಕ ಪ್ರಜಾಪ್ರಭುತ್ವದೊಂದಿಗೆ ನಡೆಯುತ್ತಿಲ್ಲ ಎಂದರು. ಈಗಾಗಲೇ ಬಣ ಬಡಿದಾಟದಿಂದ ಕಂಗೆಟ್ಟಿರುವ ಬಿಜೆಪಿಯಲ್ಲಿ ಈಗ ಸುಧಾಕರ್ ಕೂಡ ತೊಡೆ ತಟ್ಟಿರುವುದು ತೀವ್ರ ತಳಮಳ ಸೃಷ್ಟಿಸಿದೆ.
Dr K Sudhakar slams B. Y. Vijayendra says get ready for war. Is Vijayendra greater than Yediyurappa he added.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm