ಬ್ರೇಕಿಂಗ್ ನ್ಯೂಸ್
30-01-25 10:58 am HK News Desk ಕರ್ನಾಟಕ
ಬೆಳಗಾವಿ, ಜ.30: ಉತ್ತರ ಪ್ರದೇಶದ ಪ್ರಯಾಗರಾಜ್ ಕುಂಭಮೇಳದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ಬೆಳಗಾವಿ ಜಿಲ್ಲೆಯ ತಾಯಿ - ಮಗಳು ಸೇರಿ ನಾಲ್ವರು ಕನ್ನಡಿಗರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಬೆಳಗಾವಿ ನಗರದಿಂದ ಒಟ್ಟು 60 ಜನರ ತಂಡ ಕುಂಭಮೇಳಕ್ಕೆ ಹೋಗಿದ್ದು ಜೊತೆಯಾಗಿರುವಾಗಲೇ ದುರಂತ ನಡೆದುಹೋಗಿತ್ತು.
ಬೆಳಗಾವಿ ನಗರದ ವಡಗಾವಿಯ ನಿವಾಸಿಗಳಾದ ತಾಯಿ ಜ್ಯೋತಿ ಹತ್ತರವಾಠ(50), ಮಗಳು ಮೇಘನಾ ಹತ್ತರವಾಠ(25) ಮೃತಪಟ್ಟಿದ್ದಾರೆ. ಬೆಳಗಾವಿ ಶೆಟ್ಟಿ ಗಲ್ಲಿ ನಿವಾಸಿ ಅರುಣ ಕೋಪಾರ್ಡೆ ಮತ್ತು ಶಿವಾಜಿ ನಗರದ ನಿವಾಸಿ ಮಾಧುರಿ ಊರ್ಫ ಮಹಾದೇವಿ ಬಾವನೂರು ಅಸುನೀಗಿದ್ದಾರೆ. ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯರಾತ್ರಿಯೇ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಇವೆರಲ್ಲರೂ ಒಟ್ಟಾಗಿ ಹೋಗುತ್ತಿದ್ದರು. ಇದೇ ಸಂದರ್ಭದಲ್ಲಿ ಅರುಣ ಕೋರ್ಪಡೆ ಪತ್ನಿ ಕಾಂಚನಾ ಫೇಸ್ಬುಕ್ ಲೈವ್ ನಲ್ಲಿ ಜನದಟ್ಟಣೆ ಬಗ್ಗೆ ಬಿಚ್ಚಿಟ್ಟಿದ್ದರು. ಅಲ್ಲದೇ ಕರ್ನಾಟಕದಿಂದ ಬರೋರು ಹುಷಾರಾಗಿ ಬನ್ನಿ ಎಂದೂ ಎಚ್ಚರಿಕೆ ಕೊಟ್ಟಿದ್ದರು. ಇದೇ ವೇಳೆ ಕಾಲ್ತುಳಿತ ಆಗಿದ್ದು 60 ಜನರ ಗುಂಪು ಚೆಲ್ಲಾಪಿಲ್ಲಿಯಾಗಿದೆ. ಗಂಭೀರ ಗಾಯಕೊಂಡಿದ್ದ ಜ್ಯೋತಿ, ಮೇಘನಾ, ಅರುಣ ಮತ್ತು ಮಹಾದೇವಿಯನ್ನ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ ಉಸಿರುಗಟ್ಟಿ ಇವರು ಮೃತಪಟ್ಟಿದ್ದಾರೆ.
ಸುದ್ದಿ ಗೊತ್ತಾಗುತ್ತಿದ್ದಂತೆ ಮೃತರ ಮನೆಗೆ ಶಾಸಕರಾದ ಅಭಯ ಪಾಟೀಲ್, ಆಶೀಫ್ ಸೇಠ್, ಸಂಸದ ಜಗದೀಶ್ ಶೆಟ್ಟರ್ ಭೇಟಿ ನೀಡಿ ಸಾಂತ್ವನ ಹೇಳಿದರು. ಅಲ್ಲದೆ, ಪ್ರಯಾಗರಾಜ್ ಆಸ್ಪತ್ರೆಯಲ್ಲಿ ಇರುವ ಮೃತದೇಹಗಳನ್ನ ಬೆಳಗಾವಿ ಕರೆತರಲು ಉತ್ತರ ಪ್ರದೇಶದ ಪ್ರವಾಸೋದ್ಯಮ ಸಚಿವರೊಂದಿಗೆ ಶಾಸಕ ಅಭಯ ಪಾಟೀಲ್ ಮಾತನಾಡಿದರು.
ಪ್ರಕರಣ ಸಂಬಂಧಿಸಿ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಹೇಳಿಕೆ ನೀಡಿದ್ದು ನಾಲ್ಕು ಜನ ಮೃತಪಟ್ಟಿರುವುದನ್ನು ಖಚಿತ ಪಡಿಸಿಕೊಂಡಿದ್ದೇವೆ. ಬೆಳಗಾವಿಯ ಇಬ್ಬರು ಸೀನಿಯರ್ ಅಧಿಕಾರಿ ಹರ್ಷ ಶೆಟ್ಟಿ ಸ್ಪೆಷಲ್ ಡಿಸಿ, ಶೃತಿ ಬೆಳಗಾವಿ ಹೆಚ್ಚುವರಿ ಎಸ್ಪಿ ಅವರನ್ನ ಇದಕ್ಕಾಗಿ ನೇಮಕ ಮಾಡಿದ್ದೇವೆ. ಅವರು ಈ ಕೂಡಲೇ ದೆಹಲಿಗೆ ತೆರಳಿ ಬೆಳಗಾವಿಗೆ ಶವ ಕರೆತರಲು ವ್ಯವಸ್ಥೆ ಮಾಡಲಿದ್ದಾರೆ. ಗಾಯಾಳುಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಪ್ರಯಾಗ್ರಾಜ್ ನಲ್ಲಿ ಲೋಡ್ ಜಾಸ್ತಿ ಇದೆ. ಹೀಗಾಗಿ ಆ್ಯಂಬುಲೆನ್ಸ್ ಮೂಲಕ ದೆಹಲಿಗೆ ಶವ ಶಿಫ್ಟ್ ಮಾಡ್ತೇವೆ ಎಂದು ತಿಳಿಸಿದ್ದಾರೆ.
ನಾಲ್ವರು ಸಾವು ಖಚಿತವಾಗಿದ್ದು ತಂಡದಲ್ಲಿದ್ದ ಇತರೇ 56 ಮಂದಿ ಬಸ್ಸಿನಲ್ಲಿ ಪ್ರಯಾಗರಾಜ್ ನಿಂದ ಬೆಳಗಾವಿಗೆ ಹೊರಟಿದ್ದಾರೆ.
Four people from Karnataka, including a woman and her daughter, were among those who lost their lives in the stampede at the Maha Kumbh in Prayagraj, on Wednesday.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm