ಬ್ರೇಕಿಂಗ್ ನ್ಯೂಸ್
30-01-25 10:11 pm Bangalore Correspondent ಕರ್ನಾಟಕ
ಬೆಂಗಳೂರು, ಜ.30: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮತ್ತೆ ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಪಕ್ಷ ಯಾವ ದಿಕ್ಕಿನಲ್ಲಿ ಹೋಗುತ್ತಿದೆ ? ಇವರ ಉದ್ದೇಶ ಪಕ್ಷ ಕಟ್ಟಬೇಕೋ ಅಂತನೋ ಕಂಪನಿ ಕಟ್ಟಬೇಕು ಅಂತಾನೋ ? ಇವರ ದುಡ್ಡು ಮಾತ್ರ ಈಗ ಮಾತನಾಡ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುತ್ತೆ ಎಂಬ ವಿಚಾರದಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರಲ್ಲಿ ಒಂದು ಮನವಿ ಮಾಡ್ತೀನಿ. ಯಾಕೆ ಚುನಾವಣೆ ಸರ್ಕಸ್ ಮಾಡ್ತಿದ್ದೀರಾ? ನೇರವಾಗಿ ಅಧ್ಯಕ್ಷರನ್ನೇ ಘೋಷಣೆ ಮಾಡಿ ಕೈಬಿಟ್ಟುಬಿಡಿ. ಕಾರಜೋಳ ಅವರನ್ನ ಹೊಡೆಯಲು ಮುಂದಾದವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಿದ್ದೀರಾ. ಯಾವ ದಿಕ್ಕಿನಲ್ಲಿ ಪಕ್ಷ ಸಾಗುತ್ತಿದೆ ಎನ್ನುವುದನ್ನು ಇದು ಸೂಚಿಸ್ತಾ ಇದೆ ಎಂದರು.
ಅಣ್ಣಾ ಕೇಂದ್ರ ಮಂತ್ರಿಯಾಗಲಿ, ಅಪ್ಪ ಉಪ ರಾಷ್ಟ್ರಪತಿಯಾಗಲಿ ಎನ್ನುವ ರೀತಿ ಪಕ್ಷ ನಡೆಸಲು ಆಗೋದಿಲ್ಲ. ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷ ಮಾಡೋದಾದ್ರೆ ಮಾಡಿಬಿಡಿ, ಚುನಾವಣಾ ಪ್ರಕ್ರಿಯೆ ನಾಟಕ ಬೇಡ. ನಿಮಗೆ ಬೇಕಾದವರನ್ನ ಮತದಾರರನ್ನಾಗಿ ಮಾಡೋದಾದ್ರೆ ಮತದಾನ ಯಾಕೆ? ಎಂದು ಪ್ರಶ್ನಿಸಿದರು.
ಚುನಾವಣಾ ಪ್ರಕ್ರಿಯೆ ಸರಿಯಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಯತ್ನಾಳ್ ತಿರುಗೇಟು ನೀಡಿದ್ದು, ಇವರು ಚಡ್ಡಿ ಹಾಕೋಕಿಂತ ಮುಂಚೆ ನಾನು ಜಿಲ್ಲಾಧ್ಯಕ್ಷ ಮತ್ತು ರಾಜ್ಯದ ಉಪಾಧ್ಯಕ್ಷನಾಗಿದ್ದೆ. ಯಡಿಯೂರಪ್ಪ ಒಬ್ಬರೇ ಪಕ್ಷ ಕಟ್ಟಿಲ್ಲ. ನಮ್ಮೆಲ್ಲರ ದುಡಿಮೆ ಇದೆ. ಈ ಬಚ್ಚಾನಿಂದ ಏನು ಕಲಿಯಬೇಕಾಗಿಲ್ಲ ಎಂದು ಕಿಡಿಕಾರಿದರು.
ಏನ್ ಮಾಡ್ತೀರಾ.. ಹೊರಗಡೆ ಹಾಗ್ತೀರಾ? ಅಪ್ಪನನ್ನ ಹೆದರಿಸಿರಬಹುದು. ಎಲ್ಲರನ್ನೂ ಹೆದರಿಸಲು ಆಗೋದಿಲ್ಲ. ನಾವು ಸತ್ಯದ ಪರವಾಗಿ ನಿಲ್ಲುತ್ತೇವೆ. ಈ ಹಿಂದೆ ಅರುಣ್ ಸಿಂಗ್ ಎಂಬ ರಾಜ್ಯ ಉಸ್ತುವಾರಿ ಇದ್ದಾಗ ವಿಜಯೇಂದ್ರರನ್ನು ಹೊಗಳಿ ಸಾಕಷ್ಟು ಅನುಕೂಲ ಮಾಡಿಕೊಂಡು ಹೋದ್ರು ಎಂದು ಆರೋಪಿಸಿದರು. ಪಕ್ಷ ಕಟ್ಟಲು ಎಲ್ಲರ ಸಲಹೆ ಬೇಕು. ಆದ್ರೆ ನಿಮಗೆ ಬೇಕಾದ ನಾಲ್ವರ ಸಲಹೆಗಳನ್ನಲ್ಲ. ಮಾಜಿ ಕೆಜೆಪಿಯಲ್ಲಿ ಅತಿನಿಷ್ಠರು ಯಾರು ಇದ್ರೋ ಅವರಿಗೆ ಮಾತ್ರ ಈಗ ಆದ್ಯತೆ ಸಿಗ್ತಿದೆ. ಹೊಂದಾಣಿಕೆಯಿಂದ ಪಕ್ಷವನ್ನು ಬಲಿ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Yatnal slams state president BY Vijayendra, says why election circus, directly announce the president. Yatnal expressed confidence of securing a win if he contested for the state BJP chief’s post. “My victory is imminent,” Yatnal announced to the media.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm