ಬ್ರೇಕಿಂಗ್ ನ್ಯೂಸ್
02-02-25 01:43 pm HK News Desk ಕರ್ನಾಟಕ
ಕಲಬುರಗಿ, ಫೆ.2: ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜಿನಾಮೆ ನೀಡಿ ಅಚ್ಚರಿ ಮೂಡಿಸಿರುವ ಅಳಂದ ಶಾಸಕ ಬಿ.ಆರ್ ಪಾಟೀಲ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಯಾವತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ರಾಜಿನಾಮೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೆ ವರೆಗೂ ಸಿದ್ದರಾಮಯ್ಯ ಅವರ ಸ್ನೇಹಿತನಾಗಿಯೇ ಉಳಿಯುತ್ತೇನೆ ಎಂದು ಬಿಆರ್ ಪಾಟೀಲ್ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.
ಬಿಆರ್ ಪಾಟೀಲ್ ದಿಢೀರ್ ರಾಜೀನಾಮೆ ನಿರ್ಧಾರ ಕಾಂಗ್ರೆಸ್ ವಲಯದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಏಕಾಏಕಿ ಏಕೆ ರಾಜೀನಾಮೆ ನೀಡಿದ್ದಾರೆ ಎಂಬ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಅವರು ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅಸಮಾಧಾನದ ಮಾತುಗಳನ್ನಾಡಿದ್ದಾರೆ.
ಬಿಆರ್ ಪಾಟೀಲ್ ಅವರು ಆಳಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಯಸಿದ್ದರು. ಸಚಿವ ಸ್ಥಾನ ಸಿಗದೇ ಇದ್ದುದರಿಂದ ಹಿರಿಯ ಶಾಸಕರಿಗೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿತ್ತು. ಇದರ ಜೊತೆಗೆ ಹೆಚ್ಚಿನ ಅನುದಾನ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದರು. ಕಳೆದ ಬಜೆಟ್ನಲ್ಲಿ ಆಳಂದ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ನೀಡದೆ ಇರುವುದಕ್ಕೆ ಬೇಸರಗೊಂಡಿದ್ದರು. ಈ ಬಾರಿ ರಾಜೀನಾಮೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
BR Patil, senior Congress MLA and a close associate of CM Siddaramaiah, created quite a flutter in the state's political circles Saturday as he resigned from his position as the CM's political adviser. His sudden exit comes at a time when differences within Congress over clamours for changes in the party's state leadership have intensified.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm