ಬ್ರೇಕಿಂಗ್ ನ್ಯೂಸ್
03-02-25 03:18 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.3: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದನ್ನು ಬಿಜೆಪಿ ವ್ಯಂಗ್ಯವಾಡಿದೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್ ಮೇಧಾವಿಗಳಾದ ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ಬಿಜೆಪಿ ಟೀಕಿಸಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದರು. 'ಶಬ' ಎಂದು ಬರೆದ ಬಳಿಕ ಬೆಂಬಲಿಗರು ಶುಭ ಮಾಡಲು ಸೂಚಿಸಿದ್ದರಿಂದ ಆನಂತರ ಸರಿಯಾಗಿ ಬರೆದಿದ್ದರು. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಶಿಕ್ಷಣ ಸಚಿವರ ರೀತಿಯಲ್ಲೇ ಕನ್ನಡ ಸಂಸ್ಕೃತಿ ಸಚಿವರಿಗೂ ಕನ್ನಡ ಓದಲು, ಬರೆಯಲು ಬರಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ವ್ಯಂಗ್ಯವಾಡಿದೆ. ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೂಲೆ ಎಂದಿರುವ ಬಿಜೆಪಿ, ಕನ್ನಡ ಓದಲು ಬರೆಯಲು ಬಾರದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಒಂದು ಕಡೆಯಾದರೆ, ಕನ್ನಡದ ಸುಲಭವಾದ ಪದವನ್ನು ಬರೆಯಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿಲ ವಿಲ ಒದ್ದಾಡಿದ್ದಾರೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್ ಮೇಧಾವಿಗಳಾದ ಶಿಕ್ಷಣ ಸಚಿವ, ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ವ್ಯಂಗ್ಯವಾಡಿದೆ.
ಕೆ.ಪಿ.ಎಸ್ಸಿ ಪ್ರಶ್ನೆ ಪತ್ರಿಕೆಗಳಲ್ಲು ಪದೇ ಪದೇ ಕನ್ನಡ ವ್ಯಾಕರಣ ತಪ್ಪಾಗಿ ಮುದ್ರಿಸುವುದು. ಕನ್ನಡ ಶಾಲೆಗಳನ್ನು ಮುಚ್ಚಿಸುತ್ತಿರುವುದು ಈ ಎಲ್ಲವನ್ನೂ ನೋಡಿದರೆ ಕರುನಾಡಲ್ಲಿ ಕನ್ನಡವನ್ನು ಅಳಿಸಿ ಹಾಕಬೇಕೆಂದು ಕಾಂಗ್ರೆಸ್ ಹೊರಟಿದೆ ಎಂದೂ ಬಿಜೆಪಿ ಕಿಡಿಕಾರಿದೆ.
Shivraj Tangadagi, the Minister of #Kannada and #Culture, struggling with "Shubhavagali" – looks like even he needs a dictionary for cultural preservation! #karnataka https://t.co/OBbs4CdwSM
— HotTakeInsight (@HotTakeInsight) February 1, 2025
Kannada and Culture Minister Shivaraj Tangadagi was trolled severely by the opposition BJP after he struggled to write a Kannada word during his visit to an Anganvadi in Karatagi village in Koppal district.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm