ಬ್ರೇಕಿಂಗ್ ನ್ಯೂಸ್
05-02-25 12:29 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.5: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಒಂದೇ ದಿನದ ಅಂತರದಲ್ಲಿ 6 ಜನ ಬಲಿಯಾಗಿದ್ದು, ಬೆಳಗಾವಿ, ಹಾವೇರಿ, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಸೇರಿದಂತೆ ಒಟ್ಟು 6 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಅಡವಿ ಆಂಜನೇಯ ಬಡಾವಣೆಯಲ್ಲಿ ಮಾಲತೇಶ್ (42) ಎಂಬವರು ಮೈಕ್ರೋ ಫೈನಾನ್ಸ್ ಕಿರುಕುಳದಿಂದ ನೊಂದು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡ ತಾಲೂಕಿನ ಕಂಟೇನಹಳ್ಳಿಯಲ್ಲಿ ರೈತ ರವಿ (50) ಎಂಬವರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ವಿವಿಧ ಸಹಕಾರಿ ಸಂಘ, ಮೈಕ್ರೋ ಫೈನಾನ್ಸ್ ಗಳಿಂದ 9 ಲಕ್ಷ ಸಾಲ ಮಾಡಿದ್ದರು. ಜೊತೆಗೆ ಶುಂಠಿ ಬೆಲೆ ಕುಸಿತ ಕಂಡಿದ್ದು, ಇದರಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಚ್.ನಾಗಸಂದ್ರ ಗ್ರಾಮದಲ್ಲಿ ಎನ್.ಆರ್ ನರಸಿಂಹಯ್ಯ (58) ಎಂಬವರು ನೇಣಿಗೆ ಶರಣಾಗಿದ್ದಾರೆ. ಆಟೋ ಚಾಲಕರಾಗಿದ್ದ ಇವರು ಧರ್ಮಸ್ಥಳ ಸಂಘ, ಆಶೀರ್ವಾದ, ಗ್ರಾಮೀಣ ಸಂಘ, ಎಲ್ ಅಂಡ್ ಟಿ, ಸ್ಪಂದನ, ಸಮಸ್ತ, ನವ ಚೈತನ್ಯ ಫೈನಾನ್ಸ್ ಕಂಪನಿಗಳಲ್ಲಿ ಒಟ್ಟು 3.5 ಲಕ್ಷ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಸಾಲ ಕಟ್ಟಲು ಹಣವಿಲ್ಲದ ಕಾರಣ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಗಿರೀಶ್ (26) ಎಂಬ ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರೀಶ್ ವಿವಿಧ ಮೈಕ್ರೋ ಫೈನಾನ್ಸ್ ಗಳಿಂದ 4 ಲಕ್ಷ ರೂ. ಸಾಲ ಮಾಡಿದ್ದರು. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಶಿವನಪ್ಪ ಧರ್ಮಟ್ಟಿ(66) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕ್ಯಾನ್ಸರ್ ಪೀಡಿತ ಪತ್ನಿ ಚಿಕಿತ್ಸೆಗಾಗಿ ವಿವಿಧ ಫೈನಾನ್ಸ್ ಕಂಪನಿಗಳಿಂದ 10 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಆದ್ರೆ, ಆ ಸಾಲವನ್ನು ಮರು ಪಾವತಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಲಾರಂಭಿಸಿದ್ದರು. ಇದರಿಂದ ಬೇಸತ್ತು ಶಿವನಪ್ಪ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
Harassment By Microfinance Companies In Karnataka total 6 commit suicide in a span of few days gap. Meanwhile, Karnataka Deputy Chief Minister D K Shivakumar on Monday said that the government had planned an ordinance to stop the 'torture' of the poor by microfinance companies in the name of 'loan recovery'.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm