ಬ್ರೇಕಿಂಗ್ ನ್ಯೂಸ್
16-12-20 02:51 pm Headline Karnataka News Network ಕರ್ನಾಟಕ
ಕಾಸರಗೋಡು, ಡಿ.16: ಕೇರಳ ರಾಜ್ಯಾದ್ಯಂತ ಸ್ಥಳೀಯಾಡಳಿತಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮಧ್ಯಾಹ್ನ ವರೆಗಿನ ಫಲಿತಾಂಶದಲ್ಲಿ ಕಾಸರಗೋಡು ನಗರಸಭೆಯಲ್ಲಿ ಯುಡಿಎಫ್ ಮತ್ತೆ ಅಧಿಕಾರ ಹಿಡಿದಿದೆ. ಯುಡಿಎಫ್ 21, ಬಿಜೆಪಿ 14 ಹಾಗೂ ಎಲ್ ಡಿಎಫ್ ಒಂದು ಸ್ಥಾನಗಳನ್ನು ಪಡೆದಿದೆ. ಪಕ್ಷೇತರರು ಎರಡು ಸ್ಥಾನ ಗಳಿಸಿದ್ದಾರೆ.
ವರ್ಕಾಡಿ ಬಿಜೆಪಿ 5, ಎಲ್ ಡಿಎಫ್ 6
ಇನ್ನು ವರ್ಕಾಡಿ ಪಂಚಾಯತ್ ನಲ್ಲಿ ಎಲ್ ಡಿಎಪ್ – 6, ಯುಡಿಎಫ್ – 4, ಬಿಜೆಪಿ 5 ಸ್ಥಾನಗಳನ್ನು ಪಡೆದಿದೆ. ಎಸ್ ಡಿಪಿಐ ಒಂದು ಸ್ಥಾನವನ್ನು ಪಡೆದಿದೆ. ಬಿಜೆಪಿ ವರ್ಕಾಡಿ ಪಂಚಾಯತ್ ನಲ್ಲಿ ಇದೇ ಮೊದಲಿಗೆ ಐದು ಸ್ಥಾನಗಳನ್ನು ಗಳಿಸಿದೆ. ಯಾವುದೇ ಪಕ್ಷ ಅಧಿಕಾರ ಪಡೆಯಲು ಬಿಜೆಪಿ ನಿರ್ಣಾಯಕ ಎನಿಸಿದೆ. ಕೊಣಿಬೈಲು ವಾರ್ಡಿನಲ್ಲಿ ಮಮತಾ, ವರ್ಕಾಡಿ ಗೀತಾ ಭಾಸ್ಕರ್, ಕೊಡ್ಲಮೊಗರಿನಲ್ಲಿ ಆಶಾ, ಬೊಡ್ಡೋಡಿ ಪದ್ಮಾವತಿ ಹಾಗೂ ಅರಿಬೈಲು ವಾರ್ಡಿನಲ್ಲಿ ರಾಜ್ ಕುಮಾರ್ ಶೆಟ್ಟಿ ಗೆಲುವು ಕಂಡಿದ್ದಾರೆ. ಅರಿಬೈಲು ವಾರ್ಡಿನಲ್ಲಿ ನಿಕಟ ಪೈಪೋಟಿಯಿದ್ದು ಬಿಜೆಪಿ ಅಭ್ಯರ್ಥಿ 33 ಮತಗಳಿಂದ ಗೆದ್ದಿದ್ದಾರೆ. ರಾಜ್ ಕುಮಾರ್ 457, ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಪುರುಷೋತ್ತಮ 424, ಕಾಂಗ್ರೆಸ್ ಅಭ್ಯರ್ಥಿ ಶರೀಫ್ 338 ಮತಗಳನ್ನು ಪಡೆದಿದ್ದಾರೆ.


ಮೀಂಜದಲ್ಲಿ ಆರು ಬಿಜೆಪಿ, ಎಲ್ ಡಿಎಫ್ 4
ಮೀಂಜ ಪಂಚಾಯತಿನಲ್ಲಿ ಬಿಜೆಪಿ 6, ಎಲ್ ಡಿಎಫ್ 4, ಯುಡಿಎಫ್ 3 ಸ್ಥಾನಗಳನ್ನು ಗೆದ್ದುಕೊಂಡಿದೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ. ಮೀಂಜದಲ್ಲೂ ದೊಡ್ಡ ಪಕ್ಷವಾಗಿ ಮೂಡಿಬಂದಿರುವ ಬಿಜೆಪಿಗೆ ಅಧಿಕಾರ ಪಡೆಯಲು ಎಲ್ ಡಿಎಫ್ ಅಥವಾ ಯುಡಿಎಫ್ ನೆರವು ಪಡೆಯಬೇಕಿದೆ.

ಮಂಜೇಶ್ವರ ಪಂಚಾಯತ್ ನಲ್ಲಿ ಯುಡಿಎಫ್ ಎಂಟು ಸ್ಥಾನಗಳನ್ನು ಪಡೆದಿದ್ದರೆ, ಬಿಜೆಪಿ 6 ಸ್ಥಾನಗಳನ್ನು ಗೆದ್ದಿದೆ. ಎಲ್ ಡಿಎಫ್ 3, ಎಸ್ ಡಿಪಿಐ 2, ಐಎನ್ ಡಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಪಜ್ವ ಗೆಲುವು ಕಂಡಿದ್ದಾರೆಂದು ಮೂಲಗಳು ತಿಳಿಸಿವೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm