ಬ್ರೇಕಿಂಗ್ ನ್ಯೂಸ್
16-12-20 02:51 pm Headline Karnataka News Network ಕರ್ನಾಟಕ
ಕಾಸರಗೋಡು, ಡಿ.16: ಕೇರಳ ರಾಜ್ಯಾದ್ಯಂತ ಸ್ಥಳೀಯಾಡಳಿತಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮಧ್ಯಾಹ್ನ ವರೆಗಿನ ಫಲಿತಾಂಶದಲ್ಲಿ ಕಾಸರಗೋಡು ನಗರಸಭೆಯಲ್ಲಿ ಯುಡಿಎಫ್ ಮತ್ತೆ ಅಧಿಕಾರ ಹಿಡಿದಿದೆ. ಯುಡಿಎಫ್ 21, ಬಿಜೆಪಿ 14 ಹಾಗೂ ಎಲ್ ಡಿಎಫ್ ಒಂದು ಸ್ಥಾನಗಳನ್ನು ಪಡೆದಿದೆ. ಪಕ್ಷೇತರರು ಎರಡು ಸ್ಥಾನ ಗಳಿಸಿದ್ದಾರೆ.
ವರ್ಕಾಡಿ ಬಿಜೆಪಿ 5, ಎಲ್ ಡಿಎಫ್ 6
ಇನ್ನು ವರ್ಕಾಡಿ ಪಂಚಾಯತ್ ನಲ್ಲಿ ಎಲ್ ಡಿಎಪ್ – 6, ಯುಡಿಎಫ್ – 4, ಬಿಜೆಪಿ 5 ಸ್ಥಾನಗಳನ್ನು ಪಡೆದಿದೆ. ಎಸ್ ಡಿಪಿಐ ಒಂದು ಸ್ಥಾನವನ್ನು ಪಡೆದಿದೆ. ಬಿಜೆಪಿ ವರ್ಕಾಡಿ ಪಂಚಾಯತ್ ನಲ್ಲಿ ಇದೇ ಮೊದಲಿಗೆ ಐದು ಸ್ಥಾನಗಳನ್ನು ಗಳಿಸಿದೆ. ಯಾವುದೇ ಪಕ್ಷ ಅಧಿಕಾರ ಪಡೆಯಲು ಬಿಜೆಪಿ ನಿರ್ಣಾಯಕ ಎನಿಸಿದೆ. ಕೊಣಿಬೈಲು ವಾರ್ಡಿನಲ್ಲಿ ಮಮತಾ, ವರ್ಕಾಡಿ ಗೀತಾ ಭಾಸ್ಕರ್, ಕೊಡ್ಲಮೊಗರಿನಲ್ಲಿ ಆಶಾ, ಬೊಡ್ಡೋಡಿ ಪದ್ಮಾವತಿ ಹಾಗೂ ಅರಿಬೈಲು ವಾರ್ಡಿನಲ್ಲಿ ರಾಜ್ ಕುಮಾರ್ ಶೆಟ್ಟಿ ಗೆಲುವು ಕಂಡಿದ್ದಾರೆ. ಅರಿಬೈಲು ವಾರ್ಡಿನಲ್ಲಿ ನಿಕಟ ಪೈಪೋಟಿಯಿದ್ದು ಬಿಜೆಪಿ ಅಭ್ಯರ್ಥಿ 33 ಮತಗಳಿಂದ ಗೆದ್ದಿದ್ದಾರೆ. ರಾಜ್ ಕುಮಾರ್ 457, ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಪುರುಷೋತ್ತಮ 424, ಕಾಂಗ್ರೆಸ್ ಅಭ್ಯರ್ಥಿ ಶರೀಫ್ 338 ಮತಗಳನ್ನು ಪಡೆದಿದ್ದಾರೆ.


ಮೀಂಜದಲ್ಲಿ ಆರು ಬಿಜೆಪಿ, ಎಲ್ ಡಿಎಫ್ 4
ಮೀಂಜ ಪಂಚಾಯತಿನಲ್ಲಿ ಬಿಜೆಪಿ 6, ಎಲ್ ಡಿಎಫ್ 4, ಯುಡಿಎಫ್ 3 ಸ್ಥಾನಗಳನ್ನು ಗೆದ್ದುಕೊಂಡಿದೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ. ಮೀಂಜದಲ್ಲೂ ದೊಡ್ಡ ಪಕ್ಷವಾಗಿ ಮೂಡಿಬಂದಿರುವ ಬಿಜೆಪಿಗೆ ಅಧಿಕಾರ ಪಡೆಯಲು ಎಲ್ ಡಿಎಫ್ ಅಥವಾ ಯುಡಿಎಫ್ ನೆರವು ಪಡೆಯಬೇಕಿದೆ.

ಮಂಜೇಶ್ವರ ಪಂಚಾಯತ್ ನಲ್ಲಿ ಯುಡಿಎಫ್ ಎಂಟು ಸ್ಥಾನಗಳನ್ನು ಪಡೆದಿದ್ದರೆ, ಬಿಜೆಪಿ 6 ಸ್ಥಾನಗಳನ್ನು ಗೆದ್ದಿದೆ. ಎಲ್ ಡಿಎಫ್ 3, ಎಸ್ ಡಿಪಿಐ 2, ಐಎನ್ ಡಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಪಜ್ವ ಗೆಲುವು ಕಂಡಿದ್ದಾರೆಂದು ಮೂಲಗಳು ತಿಳಿಸಿವೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm