ಬ್ರೇಕಿಂಗ್ ನ್ಯೂಸ್
10-02-25 01:40 pm HK News Desk ಕರ್ನಾಟಕ
ರಾಮನಗರ, ಫೆ.10: ನಕಲಿ ಚಿನ್ನಾಭರಣ ಅಡವಿಟ್ಟು ಸುಮಾರು 9 ಕೋಟಿ ರೂ. ವಂಚಿಸಿರುವ ಪ್ರಕರಣ ಮಾಗಡಿ ತಾಲೂಕಿನ ಕುದೂರು ಬಿಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದಿದ್ದು ಇದರಲ್ಲಿ ಶಾಸಕ ಬಾಲಕೃಷ್ಣ ಅವರ ಸೋದರನೇ ಶಾಮೀಲಾಗಿದ್ದಾರೆ. ಜಿಲ್ಲಾ ಶಾಖೆಯವರು ಇದರ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ.
ರೈತರು ಹಾಗೂ ಸಾರ್ವಜನಿಕರ ಹಣ ದೋಚುವ ಉದ್ದೇಶದಿಂದ ನಕಲಿ ಬಂಗಾರದ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಜಯ್ದೇವ್ ಅವರಿಗೂ ಪತ್ರ ಬರೆದಿದ್ದು ಅವ್ಯವಹಾರಕ್ಕೆ ಕಾರಣರಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದ್ದಾರೆ.
ನಕಲಿ ಚಿನ್ನಾಭರಣ ಅಡಮಾನವಿರಿಸಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್. ಅಶೋಕ್(ತಮ್ಮಾಜಿ) ಅವರು ತಮ್ಮ ಬೆಂಬಲಿಗರಿಗೆ ಸಾಲ ಕೊಡಿಸಿದ್ದಾರೆ ಎನ್ನುವ ಮೂಲಕ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ. ಬಾಲಕೃಷ್ಣ ಬಗ್ಗೆಯೂ ಆರೋಪ ಹೊರಿಸಿದರು. ಸದರಿ ಹಗರಣದಲ್ಲಿ ಶಾಖೆಯ ಮ್ಯಾನೇಜರ್, ಚಿನ್ನ ಪರಿವೀಕ್ಷಕ ಮಾತ್ರವಲ್ಲದೆ ಸಿಬ್ಬಂದಿ ಕೂಡ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ ಎಂದು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಮಂಜುನಾಥ್ ಹೇಳಿದ್ದಾರೆ.
ಬಿಡಿಸಿಸಿ ಕುದೂರು ಶಾಖೆಯಲ್ಲಿ ಮ್ಯಾನೇಜರ್ ಆಗಿದ್ದ ವ್ಯಕ್ತಿಯ ವರ್ಗಾವಣೆ ನಂತರ ನಕಲಿ ಚಿನ್ನ ಅಡವಿಟ್ಟಿರುವ ಸಂಗತಿ ಬಹಿರಂಗವಾಗಿದೆ. ಈ ಹಿಂದೆಯೂ ಇದೇ ರೀತಿ ಎಷ್ಟು ಚಿನ್ನ ದುರುಪಯೋಗವಾಗಿರಬಹುದು? ಬಿಡಿಸಿಸಿ ಬ್ಯಾಂಕ್ನ ನಿರ್ದೇಶಕ ಅಶೋಕ್ ಅವರು ಮೂರು ತಿಂಗಳಿಗೊಮ್ಮೆ ಏಕೆ ಸಭೆಗಳನ್ನು ನಡೆಸಲಿಲ್ಲ? ಶಾಖೆ ಮ್ಯಾನೇಜರ್ ಸೇರಿದಂತೆ ಸಿಬ್ಬಂದಿಯನ್ನು ಮೂರು ವರ್ಷಕ್ಕೊಮ್ಮೆ ವರ್ಗಾವಣೆ ಮಾಡಬೇಕು. ಆದರೆ, ಏಕೆ ಮಾಡಿಲ್ಲ? ಬಿಡಿಸಿಸಿ ಬ್ಯಾಂಕ್ ಅಸ್ತಿತ್ವಕ್ಕೆ ಬಂದಾಗಿನಿಂದ ಡಿಲಿಮಿಟೇಷನ್ ಏಕೆ ಆಗಿಲ್ಲ ಎಂದು ಪ್ರಶ್ನಿಸಿದರು.
Magadi MLA Balakrishna brother alleged of fake gold pledging at bdcc bank in ramnagara.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm