ಬ್ರೇಕಿಂಗ್ ನ್ಯೂಸ್
10-02-25 10:51 pm HK News Desk ಕರ್ನಾಟಕ
ಮಂಡ್ಯ, ಫೆ 10: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಪತಿ ನಡೆಸುತ್ತಿದ್ದ ಜಿಮ್ನಲ್ಲಿಯೇ ಮಹಿಳೆ ನೇಣಿಗೆ ಶರಣಾಗಿದ್ದಾರೆ. ದಿವ್ಯ (27) ಮೃತ ಮಹಿಳೆ.
ತಾಲೂಕಿನ ಮಾಚಳ್ಳಿ ಗ್ರಾಮದ ಗೋವಿಂದರವರ ಪುತ್ರಿ ದಿವ್ಯ ಅವರನ್ನು ಕಳೆದ ಎಂಟು ವರ್ಷಗಳ ಹಿಂದೆ ಕೆಸ್ತೂರು ಗ್ರಾಮದ ಗಿರೀಶ್ ಎಂಬುವರಿಗೆ ವಿವಾಹ ಮಾಡಿಕೊಡಲಾಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ದಂಪತಿಗಳಿಬ್ಬರು ಕೆಸ್ತೂರು ಗ್ರಾಮದಲ್ಲಿ ವೈಭವ್ ಫಿಟ್ನೆಸ್ ಎಂಬ ಜಿಮ್ ಅನ್ನು ತೆರೆದು ಜೀವನ ಸಾಗಿಸುತ್ತಿದ್ದೆರನ್ನಲಾಗಿದೆ.
ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣು ;
ಎಂದಿನಂತೆ ಜಿಮ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿವ್ಯ ಯಾರು ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಪತಿ ಗಿರೀಶ್ ಸ್ಥಳದಿಂದ ಪರಾರಿಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಕುಟುಂಬದ ಜಗಳದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಜರು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತಳ ತಂದೆ ಗೋವಿಂದ ನೀಡಿದ ದೂರಿನ ಮೇರೆಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಕುಟುಂಬಸ್ಥರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ ಜಿಮ್ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ತೆರಳಿ ಸಂಬಂಧಿಕರನ್ನು ಹೊರಗೆ ಕಳುಹಿಸಿದ್ದಾರೆ. ಈ ವೇಳೆ ದಿವ್ಯಾಳ ಪತಿ ಗಿರೀಶ್, ಗಿರೀಶ್ ತಾಯಿ ವಿರುದ್ಧ ಗೃಹಿಣಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಅಳಿಯ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳದಿಂದಲೇ ಮಗಳು ಮೃತಪಟ್ಟಿದ್ದಾಳೆ, ಹೀಗಾಗಿ ಆತನನ್ನು ಬಂಧಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ.
27 year old wife commits suicide in husbands own gym in Mandya. The diseased as been identified as divya. It is said that she committed this extreme step due to husbands illicit affair
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am