ಬ್ರೇಕಿಂಗ್ ನ್ಯೂಸ್
11-02-25 02:21 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11: ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ವಿಶ್ವವಿದ್ಯಾಲಯಗಳಿಗೆ ಐದು ವರ್ಷಗಳ ನಿಷೇಧ ಮತ್ತು ಪ್ರಕರಣದಲ್ಲಿ ಭಾಗಿಯಾದ ಸಮಿತಿಯ ಸದಸ್ಯರಿಗೆ ಜೀವತಾವಧಿಗೆ ಸದಸ್ಯತ್ವ ನಿಷೇಧ ವಿಧಿಸಿರುವುದಾಗಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ಹೇಳಿಕೆ ಬಿಡುಗಡೆ ಮಾಡಿದೆ.
ಪತ್ರಿಕಾ ಹೇಳಿಕೆ ನೀಡಿರುವ ಮಂಡಳಿ, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳ ಪ್ರಕಾರ ವಿಶ್ವವಿದ್ಯಾನಿಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ‘ನ್ಯಾಕ್’ ಮಾನ್ಯತೆ ನೀಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಬರುವ ಏಪ್ರಿಲ್ನಿಂದಲೇ ಜಾರಿಗೊಳಿಸಲಾಗುತ್ತಿದೆ. ನ್ಯಾಕ್ ಮಾನ್ಯತೆ ಪಡೆಯದ ಹೊಸ ಕಾಲೇಜುಗಳು ಬೈನರಿ ಮಾನ್ಯತೆ ಕೋರಿ ಅರ್ಜಿ ಸಲ್ಲಿಸಬಹುದು. ಹೊಸ ಮಾನ್ಯತಾ ಪರಿಕಲ್ಪನೆಗಳ ಜಾರಿಯ ನಂತರ ಹಿಂದಿನ ನ್ಯಾಕ್ ಶ್ರೇಣಿ ಪದ್ಧತಿಗಳು ಕ್ರಮೇಣ ರದ್ದಾಗಲಿವೆ ಎಂದು ಮಾಹಿತಿ ನೀಡಿದೆ.
ಆಂಧ್ರಪ್ರದೇಶದ ಗುಂಟೂರಿನ ಕೋನೇರು ಲಕ್ಷ್ಮಯ್ಯ ಎಜುಕೇಷನ್ ಫೌಂಡೇಷನ್ (ಕೆಎಲ್ಇಎಫ್) ನ್ಯಾಕ್ನಿಂದ ‘ಎ’ ಪ್ಲಸ್ ಗ್ರೇಡ್ ಪಡೆಯಲು ಲಂಚ ನೀಡಿದ ಆರೋಪ ಕೇಳಿಬಂದಿತ್ತು. ಸಮಿತಿಯ ಏಳು ಸದಸ್ಯರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ದಾವಣಗೆರೆ ವಿವಿ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ, ಬೆಂಗಳೂರು ವಿವಿಯ ಪ್ರಾಧ್ಯಾಪಕ ಮತ್ತು ಐಕ್ಯುಎಸಿ–ನ್ಯಾಕ್ ನಿರ್ದೇಶಕ ಎಂ.ಹನುಮಂತಪ್ಪ ಸಮಿತಿಯಲ್ಲಿದ್ದು ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ. ಸಮಿತಿ ಭೇಟಿ ನೀಡಿದ್ದ ಕಾಲೇಜುಗಳಿಗೆ ಪುನರ್ ಪರಿಶೀಲನೆಗಾಗಿ ಮತ್ತೊಂದು ಸಮಿತಿ ಕಳುಹಿಸಿಕೊಡಲು ಮಂಡಳಿ ಕಾರ್ಯಕಾರಿ ಸಮಿತಿ ಸಭೆ ತೀರ್ಮಾನ ತೆಗೆದುಕೊಂಡಿದೆ.
ಪ್ರಕರಣದಲ್ಲಿ ಭಾಗಿಯಾದ ವಿಶ್ವವಿದ್ಯಾಲಯಗಳು ಐದು ವರ್ಷ ಮಾನ್ಯತೆಗಾಗಿ ಅರ್ಜಿ ಸಲ್ಲಿಸುವಂತಿಲ್ಲ. ಆರೋಪಕ್ಕೀಡಾದ ಸಮಿತಿ ಸದಸ್ಯರನ್ನು ಮೌಲ್ಯಮಾಪನ ಕಾರ್ಯಗಳಿಂದಲೂ ಹೊರಗಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ಹೇಳಿದೆ.
ವಿಶ್ವವಿದ್ಯಾಲಯದಲ್ಲಿ ಮೂಲಸೌಕರ್ಯಗಳು, ಸಂಶೋಧನೆ, ವೈಜ್ಞಾನಿಕ ಉಪಕರಣಗಳು, ಬೋಧನೆ, ಸಂಶೋಧನೆಗಳಿಗೆ ಪೇಟೆಂಟ್ ಬಂದಿರುವುದು, ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳ ಮಂಡನೆ, ಸಂಶೋಧನಾ ಚಟುವಟಿಕೆಗೆ ತಂತ್ರಜ್ಞಾನದ ಅಳವಡಿಕೆ ಮತ್ತಿತರ ಅಂಶಗಳನ್ನು ಆಧರಿಸಿ ನ್ಯಾಕ್ ಸಮಿತಿ ಕಾಲೇಜುಗಳಿಗೆ ಅಂಕ ಮತ್ತು ಗ್ರೇಡ್ಗಳನ್ನು ನೀಡುತ್ತದೆ.
The National Assessment and Accreditation Council (NAAC), the autonomous accreditation body for higher education institutes, has debarred Koneru Lakshmaiah Education Foundation (KLEF) in Guntur, Andhra Pradesh, for five years from applying for certification on Saturday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm