ಬ್ರೇಕಿಂಗ್ ನ್ಯೂಸ್
14-02-25 08:44 pm HK News Desk ಕರ್ನಾಟಕ
ಮೈಸೂರು, ಫೆ.14: ಕಲ್ಲು ತೂರಾಟ ನಡೆದ ನಾಲ್ಕು ದಿನಗಳ ಬಳಿಕ ಗೃಹ ಸಚಿವ ಪರಮೇಶ್ವರ್ ಉದಯಗಿರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಯಾಕಾಯಿತು, ಏನಾಯಿತು ಎಂಬುದರ ಬಗ್ಗೆ ಮಾಹಿತಿ ಪಡೆಯಲು ವಿಸಿಟ್ ಮಾಡಿದ್ದೆ. ಪ್ರಾಥಮಿಕ ಹಂತದ ಮಾಹಿತಿ ತಿಳಿದುಕೊಂಡಿದ್ದೇನೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ, ಹೀಗಾಗಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಯಾರೂ ಕೂಡ ಇಂತಹ ಘಟನೆಗಳಲ್ಲಿ ರಾಜಕೀಯ ಮಾಡಬಾರದು. ಅಂತಹ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸಾರ್ವಜನಿಕರು ಇಂತಹ ವೇಳೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಪರಮೇಶ್ವರ್ ಜನರಲ್ಲಿ ಮನವಿ ಮಾಡಿಕೊಂಡರು.
ಪೊಲೀಸ್ ಹಾಗೂ ವಾಹನಗಳ ಮೇಲೆ ಕಲ್ಲು ಹೊಡೆದವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ಈಗಾಗಲೇ ಸಿಸಿಟಿವಿ ದೃಶ್ಯ ಆಧರಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳುವವರು ಎಷ್ಟೇ ಬಲಾಢ್ಯರಾಗಿದ್ರೂ ಕ್ರಮ ತೆಗೆದುಕೊಳ್ಳುತ್ತೇವೆ. ಅಂತಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು, ಪೊಲೀಸ್ ಇಲಾಖೆಗೆ ಪಕ್ಷ ಮುಖ್ಯ ಅಲ್ಲ. ಸಮಾಜದಲ್ಲಿ ಶಾಂತಿ ಕಾಪಾಡಲಿಕ್ಕೆ ಪೊಲೀಸ್ ನವರು ಇರೋದು. ಕಾನೂನು ರಕ್ಷಣೆಗೆ ಪೊಲೀಸರ ಮೊದಲ ಆದ್ಯತೆ ಇರತ್ತೆ. ಘಟನೆ ಆದ ಬಳಿಕ ಕೆಲವರು ಹೇಳಿಕೆ ನೀಡ್ತಾರೆ. ಅದನ್ನ ಹೇಳಬಾರದು ಎಂದು ಹೇಳಲು ಸಾಧ್ಯವಿಲ್ಲ. ಅಂತಹ ಹೇಳಿಕೆಗಳಿಂದ ಪೊಲೀಸ್ ನವರನ್ನ ಕುಗ್ಗಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಅಂತಹ ಎಲ್ಲ ಟ್ರೈನಿಂಗ್ ಇರುತ್ತೆ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಠಾಣೆ ಮೇಲೆ ಕಲ್ಲು ತೂರಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಯಾಕಿಲ್ಲ.. ನಷ್ಟ ಮಾಡಿದವರಿಂದ ನಷ್ಟ ಭರಿಸುತ್ತೀರಾ ಎಂಬ ಪ್ರಶ್ನೆಗೆ, ಉತ್ತರ ಪ್ರದೇಶ ಮಾದರಿಯ ಕ್ರಮ ಕರ್ನಾಟಕಕ್ಕೆ ಸದ್ಯ ಅಗತ್ಯ ಇಲ್ಲ. ಇದರ ಬಗ್ಗೆ ಅನೇಕ ಚರ್ಚೆ ಆಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ತೆಗೆದುಕೊಂಡು ಹೋಗುವ ಕೆಲಸ ಆಗುತ್ತದೆ. ಈಗ ಅಂತಹ ಪರಿಸ್ಥಿತಿ ಇಲ್ಲ. ಮುಂದೆ ಬೇಕಿದ್ರೆ ನೋಡೋಣ. ಜನರು ಪೊಲೀಸರಿಗೆ ಸಹಕಾರ ನೀಡಬೇಕು. ಇದನ್ನ ಹೊರತುಪಡಿಸಿ ನಾವೇ ಕಾನೂನು ಕೈಗೆ ತೆಗೆದುಕೊಳ್ಳೋದು ಬೇಡ ಎಂದರು.
Four days after the stone-pelting incident triggered by a derogatory social media post in Udayagiri, Home Minister G. Parameshwara on Friday visited the police station and held a meeting with senior police officers.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm