ಬ್ರೇಕಿಂಗ್ ನ್ಯೂಸ್
14-02-25 08:44 pm HK News Desk ಕರ್ನಾಟಕ
ಮೈಸೂರು, ಫೆ.14: ಕಲ್ಲು ತೂರಾಟ ನಡೆದ ನಾಲ್ಕು ದಿನಗಳ ಬಳಿಕ ಗೃಹ ಸಚಿವ ಪರಮೇಶ್ವರ್ ಉದಯಗಿರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಯಾಕಾಯಿತು, ಏನಾಯಿತು ಎಂಬುದರ ಬಗ್ಗೆ ಮಾಹಿತಿ ಪಡೆಯಲು ವಿಸಿಟ್ ಮಾಡಿದ್ದೆ. ಪ್ರಾಥಮಿಕ ಹಂತದ ಮಾಹಿತಿ ತಿಳಿದುಕೊಂಡಿದ್ದೇನೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ, ಹೀಗಾಗಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಯಾರೂ ಕೂಡ ಇಂತಹ ಘಟನೆಗಳಲ್ಲಿ ರಾಜಕೀಯ ಮಾಡಬಾರದು. ಅಂತಹ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸಾರ್ವಜನಿಕರು ಇಂತಹ ವೇಳೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಪರಮೇಶ್ವರ್ ಜನರಲ್ಲಿ ಮನವಿ ಮಾಡಿಕೊಂಡರು.
ಪೊಲೀಸ್ ಹಾಗೂ ವಾಹನಗಳ ಮೇಲೆ ಕಲ್ಲು ಹೊಡೆದವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ಈಗಾಗಲೇ ಸಿಸಿಟಿವಿ ದೃಶ್ಯ ಆಧರಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳುವವರು ಎಷ್ಟೇ ಬಲಾಢ್ಯರಾಗಿದ್ರೂ ಕ್ರಮ ತೆಗೆದುಕೊಳ್ಳುತ್ತೇವೆ. ಅಂತಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು, ಪೊಲೀಸ್ ಇಲಾಖೆಗೆ ಪಕ್ಷ ಮುಖ್ಯ ಅಲ್ಲ. ಸಮಾಜದಲ್ಲಿ ಶಾಂತಿ ಕಾಪಾಡಲಿಕ್ಕೆ ಪೊಲೀಸ್ ನವರು ಇರೋದು. ಕಾನೂನು ರಕ್ಷಣೆಗೆ ಪೊಲೀಸರ ಮೊದಲ ಆದ್ಯತೆ ಇರತ್ತೆ. ಘಟನೆ ಆದ ಬಳಿಕ ಕೆಲವರು ಹೇಳಿಕೆ ನೀಡ್ತಾರೆ. ಅದನ್ನ ಹೇಳಬಾರದು ಎಂದು ಹೇಳಲು ಸಾಧ್ಯವಿಲ್ಲ. ಅಂತಹ ಹೇಳಿಕೆಗಳಿಂದ ಪೊಲೀಸ್ ನವರನ್ನ ಕುಗ್ಗಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಅಂತಹ ಎಲ್ಲ ಟ್ರೈನಿಂಗ್ ಇರುತ್ತೆ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಠಾಣೆ ಮೇಲೆ ಕಲ್ಲು ತೂರಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಯಾಕಿಲ್ಲ.. ನಷ್ಟ ಮಾಡಿದವರಿಂದ ನಷ್ಟ ಭರಿಸುತ್ತೀರಾ ಎಂಬ ಪ್ರಶ್ನೆಗೆ, ಉತ್ತರ ಪ್ರದೇಶ ಮಾದರಿಯ ಕ್ರಮ ಕರ್ನಾಟಕಕ್ಕೆ ಸದ್ಯ ಅಗತ್ಯ ಇಲ್ಲ. ಇದರ ಬಗ್ಗೆ ಅನೇಕ ಚರ್ಚೆ ಆಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ತೆಗೆದುಕೊಂಡು ಹೋಗುವ ಕೆಲಸ ಆಗುತ್ತದೆ. ಈಗ ಅಂತಹ ಪರಿಸ್ಥಿತಿ ಇಲ್ಲ. ಮುಂದೆ ಬೇಕಿದ್ರೆ ನೋಡೋಣ. ಜನರು ಪೊಲೀಸರಿಗೆ ಸಹಕಾರ ನೀಡಬೇಕು. ಇದನ್ನ ಹೊರತುಪಡಿಸಿ ನಾವೇ ಕಾನೂನು ಕೈಗೆ ತೆಗೆದುಕೊಳ್ಳೋದು ಬೇಡ ಎಂದರು.
Four days after the stone-pelting incident triggered by a derogatory social media post in Udayagiri, Home Minister G. Parameshwara on Friday visited the police station and held a meeting with senior police officers.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm