ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm