ಬ್ರೇಕಿಂಗ್ ನ್ಯೂಸ್
17-02-25 01:38 pm HK News Desk ಕರ್ನಾಟಕ
ಮಂಡ್ಯ, ಫೆ 17: 13 ವರ್ಷದ ಬಾಲಕನೊಬ್ಬ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಕೋವಿಯಿಂದ ಗುಂಡು ಹಾರಿಸಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ಗುಂಡು ತಗುಲಿ ತೀವ್ರ ರಕ್ತಸ್ರಾವವಾಗಿ ಬಾಲಕ ಮೃತಪಟ್ಟಿದ್ದಾನೆ.
ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಕಳ್ಳ- ಪೊಲೀಸ್ ಆಟ ಆಡುತ್ತಿದ್ದಾಗ ಬಾಲಕ ತಿಳಿಯದೆ ಅಸಲಿ ಗನ್ನಿಂದಲೇ ಶೂಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಮಕ್ಕಳ ಕೈಗೆ ಕೋವಿ ಸಿಕ್ಕಿದ್ದು ಹೇಗೆ ?:
ಕೋಳಿ ಫಾರಂನಲ್ಲಿ ಭದ್ರತೆಗಾಗಿ ಒಂದು ಅಸಲಿ ಕೋವಿ (ಗನ್) ಇಡಲಾಗಿತ್ತು. ಅದು ಸಜೀವ ಗುಂಡುಗಳಿಂದ ಲೋಡೆಡ್ ಆಗಿತ್ತು. ಪಶ್ಚಿಮ ಬಂಗಾಳದ ಶಶಾಂಕ್ ಹಾಗೂ ಲಿಪಿಕಾ ದಂಪತಿ ಇಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಇಬ್ಬರು ಗಂಡು ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ 13 ವರ್ಷದ ಬಾಲಕ (ಅಣ್ಣ) ಮೇಲಿದ್ದ ಗನ್ ತೆಗೆದುಕೊಂಡು ಕಳ್ಳ-ಪೊಲೀಸ್ ಆಟ ಆಡೋಣ ಎನ್ನುತ್ತಲೇ ತನ್ನ ತಮ್ಮನ ಮೇಲೆ ಶೂಟ್ ಮಾಡಿದ್ದಾನೆ. ಆಕಸ್ಮಿಕ ಫೈರಿಂಗ್ ಮಗುವಿನ ಹೊಟ್ಟೆ ಸೀಳಿದೆ. ತಾಯಿ ಲಿಪಿಕಾ ಅವರಿಗೂ ಗಾಯವಾಗಿದೆ.
ಹೊರಬಂದ ಮಗುವಿನ ಕರುಳು:
ಗುಂಡು ಮಗುವಿನ ಹೊಟ್ಟೆ ಸೀಳಿದ್ದರಿಂದ ಕರುಳು ಹೊರಬಂದಿತ್ತು. ಆದರೂ ಉಸಿರಾಡುತ್ತಿದ್ದ ಮಗುವಿನ ಕರುಳುಗಳನ್ನು ಹೊಟ್ಟೆಯ ಮೇಲೆ ಟವೆಲ್ನಿಂದ ಕಟ್ಟಿಕೊಂಡು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಮಗು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
ಘಟನಾ ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದರು. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗನ್ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
Mandya 13 year old boy shoots 3 year old with real gun while playing game. While they were playing police robbery game elder brother used his real gun to shoot the younger brother. Police are now investigating the case. This has created shocker waves in Mandya.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm