ಬ್ರೇಕಿಂಗ್ ನ್ಯೂಸ್
20-02-25 04:45 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.20: ಮುಜರಾಯಿ ಇಲಾಖೆ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಸರ್ಕಾರಿ ಅಧಿಕಾರಿಯೋರ್ವ ಹೆಂಡತಿ ಖಾತೆಗೆ ಹಾಕಿಸಿಕೊಂಡು ಮೋಜು ಮಸ್ತಿ ಮಾಡಿ, ಮನೆಯನ್ನೂ ಕಟ್ಟಿಸಿಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ಪೆಕ್ಟರ್ ಆಗಿದ್ದ ಹೇಮಂತ್ ಕುಮಾರ್ ಸರ್ಕಾರಿ ಖಜಾನೆಯ ಹಣವನ್ನು ಲಪಟಾಯಿಸಿ ಸಿಕ್ಕಿಬಿದ್ದಿದ್ದಾನೆ. ಈ ಹಿಂದೆ ಮುಜರಾಯಿ ಇಲಾಖೆಯಲ್ಲಿ ಹೇಮಂತ್ ಕುಮಾರ್ ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ಅರಿತುಕೊಂಡಿದ್ದ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯಿಂದ 2023- 24ರಲ್ಲಿ ಇಬ್ಬರು ತಹಶೀಲ್ದಾರ್ ಸಹಿ ಪಡೆದು ಮತ್ತು ಸೀಲ್ ನಕಲಿ ಮಾಡಿ ಸುಮಾರು 60 ಲಕ್ಷ ರೂ. ಹಣವನ್ನ ಸ್ವಂತ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾನೆ.
ಆನಂತರ, ರೆವಿನ್ಯೂ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಮಾಡಿಕೊಂಡಿದ್ದರೂ ಮುಜರಾಯಿ ಇಲಾಖೆಯ ಚೆಕ್ ಬುಕ್ಗಳನ್ನು ಮರಳಿ ಇಲಾಖೆಗೆ ನೀಡದೇ ತನ್ನ ಬಳಿಯೇ ಉಳಿಸಿಕೊಂಡಿದ್ದ. ಅಧಿಕಾರಿಗಳು ಕೇಳಿದಾಗ ಅವರಿಗೆ ಕೊಟ್ಟಿದ್ದೇನೆ, ಇವರಿಗೆ ಕೊಟ್ಟಿದ್ದೇನೆ ಎಂದು ಮರೆಮಾಚಿ, ಹಣ ಡ್ರಾ ಮಾಡಿದ್ದಾನೆ. ಎರಡು ಮೂರು ವರ್ಷದಲ್ಲಿ ಬರೋಬ್ಬರಿ 60 ಲಕ್ಷಕ್ಕೂ ಹೆಚ್ಚು ಹಣವನ್ನು ಹಂತ ಹಂತವಾಗಿ ಹೆಂಡತಿ ಸೇರಿ ಇತರರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದ.
ತಹಶೀಲ್ದಾರ್ ಮುಜರಾಯಿ ಇಲಾಖೆ ಖಾತೆಯ ಹಣದ ಬಗ್ಗೆ ಪರಿಶೀಲನೆ ಮಾಡಿದಾಗ ಅನುಮಾನ ಬಂದಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಖಚಿತ ಮಾಹಿತಿಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿ ಮುಜರಾಯಿ ಖಜಾನೆಯಿಂದ ಪಡೆದ ಹಣದಲ್ಲಿ ಮನೆಯನ್ನ ಕಟ್ಟಿಕೊಂಡಿದ್ದೇನೆ ಎಂದು ಬಾಯ್ಬಿಟ್ಟಿದ್ದಾನೆ.
ಪ್ರಕರಣ ಬೆಳಕಿಗೆ ಬಂದು ಪೊಲೀಸರು ತನಿಖೆ ಕೈಗೆತ್ತಿಕೊಂಡ ಬಳಿಕ ಗಂಡ ಲೂಟಿ ಮಾಡಿದ್ದ 60 ಲಕ್ಷ ರೂ. ಹಣವನ್ನ ಹೆಂಡತಿ ಮರಳಿ ಮುಜರಾಯಿ ಇಲಾಖೆಯ ಖಾತೆಗಳಿಗೆ ವಾಪಸ್ ಹಾಕಿದ್ದಾಳೆ. ಇದೇ ವೇಳೆ, ರೆವಿನ್ಯು ಇನ್ಸ್ ಪೆಕ್ಟರ್ ಆಗಿದ್ದ ಹೇಮಂತ್ ಕುಮಾರ್ನನ್ನ ಸೇವೆಯಿಂದ ಅಮಾನತು ಮಾಡಿದ್ದು, ತಹಸೀಲ್ದಾರ್ ಇಲಾಖಾ ವಿಚಾರಣೆಗೆ ಒಳಪಡಿಸಿದ್ದಾರೆ.
Chikkaballapur 60 lakhs transferred from muzrai account to wife's account by revenue inspector , Tahsildar exposes scam, Revenue Inspector Hemanth Kumar has been arrested and sent to jail
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm