ಬ್ರೇಕಿಂಗ್ ನ್ಯೂಸ್
20-02-25 10:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿರೀಕ್ಷೆ ಮಾಡಿದ್ದು ನಿಜವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಸಂದರ್ಭದಲ್ಲಿ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ರೀತಿ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದೂ ತಿಳಿಸಿದ್ದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.
ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? ಇವರದೇ ಅಧೀನದ ಲೋಕಾಯುಕ್ತ ಅಧಿಕಾರಿಗಳು ಕ್ಲೀನ್ಚಿಟ್ ಕೊಟ್ಟಿದ್ದಾರೆ. ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾತನ್ನು ಹಿಂತಿರುಗಿಸಿದರೆ ನಿರಪರಾಧಿ ಆಗುತ್ತಾನೆಯೇ.. ಅದೇ ಮಾದರಿಯಲ್ಲಿ ಕ್ಲೀನ್ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
Reacting strongly to the clean chit given by Karnataka Lokayukta to Chief Minister Siddaramaiah in connection with the MUDA land scam case, Karnataka unit BJP president B.Y. Vijayendra alleged that the senior Congress leader has obtained a “fake clean chit”.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm