ಬ್ರೇಕಿಂಗ್ ನ್ಯೂಸ್
20-02-25 10:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿರೀಕ್ಷೆ ಮಾಡಿದ್ದು ನಿಜವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಸಂದರ್ಭದಲ್ಲಿ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ರೀತಿ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದೂ ತಿಳಿಸಿದ್ದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.
ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? ಇವರದೇ ಅಧೀನದ ಲೋಕಾಯುಕ್ತ ಅಧಿಕಾರಿಗಳು ಕ್ಲೀನ್ಚಿಟ್ ಕೊಟ್ಟಿದ್ದಾರೆ. ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾತನ್ನು ಹಿಂತಿರುಗಿಸಿದರೆ ನಿರಪರಾಧಿ ಆಗುತ್ತಾನೆಯೇ.. ಅದೇ ಮಾದರಿಯಲ್ಲಿ ಕ್ಲೀನ್ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
Reacting strongly to the clean chit given by Karnataka Lokayukta to Chief Minister Siddaramaiah in connection with the MUDA land scam case, Karnataka unit BJP president B.Y. Vijayendra alleged that the senior Congress leader has obtained a “fake clean chit”.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm