ಬ್ರೇಕಿಂಗ್ ನ್ಯೂಸ್
17-12-20 11:09 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಪಿ.ವಿ. ಲಕ್ಷ್ಮೀ (33) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಲಕ್ಷ್ಮೀ ಅಲ್ಲಿಯೇ ಕೊಠಡಿ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 10.30ರ ಹೊತ್ತಿಗೆ ನೇಣು ಬಿಗಿದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಲಕ್ಷ್ಮೀ ಅವರು 2014ರ ಬ್ಯಾಚ್ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿ ವಿಭಾಗಕ್ಕೆ ಡಿವೈಎಸ್ಪಿ ನೇಮಕವಾಗಿದ್ದರು. ಲಕ್ಷ್ಮೀ ಪ್ರೊಬೇಷನರಿ ಬಳಿಕ ಮೊದಲ ಬಾರಿಗೆ ಸಿಐಡಿಗೆ ಡಿವೈಎಸ್ಪಿ ಆಗಿ ಪೋಸ್ಟಿಂಗ್ ಆಗಿದ್ದರು. ತನಿಖೆ ಮುಂದುವರಿದಿದ್ದು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.
ಮಾನಸಿಕವಾಗಿ ಖಿನ್ನರಾಗಿದ್ದರೇ ಮೇಲಧಿಕಾರಿಗಳ ಕಿರುಕುಳ ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಒಂದೇ ಕಡೆ ಇದ್ದು ಬೇರೆ ಪೋಸ್ಟಿಂಗ್ ಮಾಡದಿರುವುದು ಚಿಂತೆಗೆ ಕಾರಣ ಆಗಿತ್ತು ಎನ್ನಲಾಗಿದೆ.
ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ..!
ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀಗೆ ಮಕ್ಕಳಾಗಿರಲಿಲ್ಲ ಎಂಬ ಚಿಂತೆ ಇತ್ತು. ಜೊತೆಗೆ, ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದ ಪತಿಯ ಜೊತೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಸ್ನೇಹಿತೆಯ ಜೊತೆ ಹೇಳಿಕೊಂಡು ಕೊರಗುತ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತೆಯ ಮನೆಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿದ ಬಳಿಕ ಕೊಠಡಿಗೆ ತೆರಳಿದ ಲಕ್ಷ್ಮೀ ಹೊರಗೆ ಬಾರದೆ ಬಾಗಿಲು ಹಾಕ್ಕೊಂಡಿದ್ದರು. ಬಾಗಿಲು ತೆರೆಯದ್ದರಿಂದ ಸಂಶಯ ಬಂದು ಬಾಗಿಲು ಒಡೆದು ನೋಡಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮೀ ಮೂಲತಃ ಕೋಲಾರ ಜಿಲ್ಲೆಯ ಮೂಲದವರಾಗಿದ್ದರು.
A lady CID officer in Bengaluru committed suicide on Wednesday night. She has been identified as PV Laxmi. The DSP-rank official was posted in the Criminal Investigation Department here.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm