ಬ್ರೇಕಿಂಗ್ ನ್ಯೂಸ್
26-02-25 10:43 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26 : ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಆದರೆ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರು ಪಡೆದ 14 ಬದಲಿ ನಿವೇಶನ ಸೇರಿದಂತೆ ಒಟ್ಟು 1,055 ನಿವೇಶನ ಹಂಚಿಕೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಲೋಕಾಯುಕ್ತ ಕೋರ್ಟಿಗೆ ಸಲ್ಲಿಸಿರುವ ತನಿಖಾ ವರದಿಯಲ್ಲಿ ಬೊಟ್ಟು ಮಾಡಲಾಗಿದೆ. ಇದರಿಂದ ಮುಡಾ ಹಗರಣ ಸೈಟ್ ಹಂಚಿಕೆ ಮಾಡಿದ ಅಧಿಕಾರಿಗಳ ಕೊರಳಿಗೆ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ.
ಕಾನೂನು ಪ್ರಕಾರ ಭೂಮಿ ಸ್ವಾಧೀನಪಡಿಸದೆ ಮುಡಾ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿಪಡಿಸಲಾದ ಖಾಸಗಿ ಭೂಮಿಗಳ ಮಾಲೀಕರಿಗೆ ಪರಿಹಾರ ನೀಡಲು ಸರಕಾರದಿಂದ ಯಾವುದೇ ನಿಶ್ಚಿತ ಮಾರ್ಗಸೂಚಿ ಅಥವಾ ನಿಯಮಗಳಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮುಡಾದ ಹಿಂದಿನ ಆಯುಕ್ತ ನಟೇಶ್ ತಮ್ಮ ಇಚ್ಛಾನುಸಾರ ಬದಲಿ ನಿವೇಶನ ಹಾಗೂ ಪರಿಹಾರ ನೀಡಿದ್ದಾರೆ ಎಂಬುದನ್ನು ಲೋಕಾಯುಕ್ತ ತನಿಖೆಯ ವರದಿಯಲ್ಲಿ ತೋರಿಸಲಾಗಿದೆ.
ಇದೇ ರೀತಿ ನಿಯಮಗಳನ್ನು ಉಲ್ಲಂಘಿಸಿ 2016ರಿಂದ 2024ರ ವರೆಗೆ ಒಟ್ಟು 134 ಪ್ರಕರಣಗಳಲ್ಲಿ 1,055 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ದೊಡ್ಡ ಮಟ್ಟದ ನಷ್ಟವಾಗಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ನಡೆಯಬೇಕಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ತನಿಖೆ ನಂತರವಷ್ಟೇ ಎಷ್ಟು ಪ್ರಮಾಣದ ನಷ್ಟವಾಗಿದೆ ಎಂಬುದು ಗೊತ್ತಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಮೂಲಕ, ಮುಡಾ ಮಾಜಿ ಆಯುಕ್ತ ನಟೇಶ್ ಸೇರಿದಂತೆ ಇತರರ ವಿರುದ್ಧ ಹೆಚ್ಚಿನ ತನಿಖೆ ನಡೆಯಬೇಕಿದೆ ಎಂದು ಸ್ಪಷ್ಟವಾಗಿ ತಿಳಿಸಿದೆ.
ನಿವೇಶನಗಳನ್ನು ಹಂಚಿಕೆ ಸಂದರ್ಭದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡದೆ ವಿಜಯನಗರ 3 ಹಾಗೂ 4ನೇ ಹಂತದಲ್ಲಿ ಖಾಲಿಯಿದ್ದ 2,555 ನಿವೇಶನಗಳ ಪೈಕಿ 14 ನಿವೇಶನಗಳನ್ನು ಮುಡಾ ಆಯುಕ್ತ ನಟೇಶ್ 50:50ರ ಅನುಪಾತದಲ್ಲಿ ಸಿದ್ದರಾಮಯ್ಯ ಪತ್ನಿಗೆ ಹಂಚಿಕೆ ಮಾಡಿದ್ದರು. ಈ ಪ್ರಕರಣ ಮಾತ್ರವಲ್ಲದೆ, ನಟೇಶ್ ತಮ್ಮ ಅಧಿಕಾರವಧಿಯಲ್ಲಿ 50:50 ಅನುಪಾತದಲ್ಲಿ ಸಾವಿರಕ್ಕೂ ಹೆಚ್ಚು ನಿವೇಶನ ಹಂಚಿಕೆ ಮಾಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯಬೇಕು ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅಷ್ಟೇ ಅಲ್ಲದೆ, 2021ರ ಜುಲೈ 7ರಂದು ಸರಕಾರಕ್ಕೆ ಪತ್ರ ಬರೆದಿದ್ದ ಮುಡಾ ಆಯುಕ್ತ ನಟೇಶ್, ಬಿ.ಎಂ. ಪಾರ್ವತಿ ಸೇರಿದಂತೆ ಇನ್ನಿತರರಿಗೆ ಬದಲಿ ಜಮೀನು ನೀಡುವ ಕುರಿತು ಮಾರ್ಗದರ್ಶನ ನೀಡುವಂತೆ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದರು. ಬಳಿಕ, ನವೆಂಬರ್ 6 ಹಾಗೂ ನವೆಂಬರ್ 20ರಂದು ಶೇ. 50:50 ಅನುಪಾತದಲ್ಲಿ ಪ್ರಾಧಿಕಾರದ ನಿವೇಶನಗಳನ್ನು ಹಂಚಿಕೆ ಮಾಡಿದ್ದು ಈ ಕುರಿತು ಸರ್ಕಾರದ ಅನುಮತಿ ಪಡೆಯದೆ ಲೋಪ ಎಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
Lokayukta Report Reveals Muda Scam, Calls for Further Investigation Despite Clean Chit to CM Amidst Widespread Illegal Site Sharing.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm