ಬ್ರೇಕಿಂಗ್ ನ್ಯೂಸ್
27-02-25 05:48 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ಒಣಹುಲ್ಲು ಸುಟ್ಟರೆ ಹೊಸ ಚಿಗುರು ಬರುತ್ತದೆ. ತನ್ನ ಮೇಕೆಗಳಿಗೆ ಮೇವು ಸಿಗುತ್ತದೆಂಬ ದುರಾಲೋಚನೆಯಿಂದ ವ್ಯಕ್ತಿಯೊಬ್ಬ ಅರಣ್ಯ ಪ್ರದೇಶದ ಒಣ ಹುಲ್ಲಿಗೆ ಬೆಂಕಿ ಇಟ್ಟ ಪರಿಣಾಮ ಸುಮಾರು 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.
ರಾಜಪ್ಪ (42) ಎಂಬಾತ ತನ್ನ ಮೇಕೆಗಳನ್ನು ಮೇಯಿಸಲು ಸಂಗಮ ವನ್ಯಜೀವಿ ವಲಯದ ಅರಣ್ಯ ಪ್ರದೇಶಕ್ಕೆ ತೆರಳುತ್ತಿದ್ದ. ಅರಣ್ಯದಲ್ಲಿ ಹುಲ್ಲು ಒಣಗಿದ್ದನ್ನು ನೋಡಿದ ಆತ, ಇದನ್ನು ಸುಟ್ಟರೆ ಬೇಗನೆ ಹೊಸ ಹುಲ್ಲು ಚಿಗುರುತ್ತದೆ, ಆಗ ಕುರಿ-ಮೇಕೆಗಳಿಗೆ ಮೇವು ಲಭ್ಯವಾಗುತ್ತದೆ ಎಂದು ಅದಕ್ಕೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಹುಲ್ಲು ಹೊತ್ತಿಕೊಂಡು 10 ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.
ಅಗ್ನಿ ಅವಘಡ ಸುದ್ದಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದಾಗಲೇ 10 ಎಕರೆ ಅರಣ್ಯ ಭಸ್ಮವಾಗಿತ್ತು. ಈ ಅವಘಡದಲ್ಲಿ ಕೆಲವು ವನ್ಯಜೀವಿಗಳು ಸಹ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಘಟನೆ ನಡೆದ ಸ್ಥಳದಲ್ಲೇ ರಾಜಪ್ಪ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಆತ ತಾನೇ ಬೆಂಕಿ ಹಚ್ಚಿದ್ದಾಗಿ ಒಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A misguided attempt to create fresh grass for grazing led to a devastating forest fire in the Sangama Wildlife Sanctuary, Doddalahalli, Kanakapura taluk. A man set dry grass on fire, believing it would promote new growth, but ended up destroying 10 acres of forest land.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm