ಬ್ರೇಕಿಂಗ್ ನ್ಯೂಸ್
03-03-25 12:03 pm HK News Desk ಕರ್ನಾಟಕ
ಕಾರ್ಕಳ, ಮಾ.3: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಅದು ಈಗಾಗಲೇ ನಿರ್ಧಾರ ಆಗಿರುವ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸಿಗ ವೀರಪ್ಪ ಮೊಯ್ಲಿ ಹೇಳಿದ್ದು, ರಾಜ್ಯದಲ್ಲಿ ಸಿಎಂ ಸ್ಥಾನ ಅಧಿಕಾರ ಹಂಚಿಕೆಯ ಸೂತ್ರದ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವೀರಪ್ಪ ಮೊಯ್ಲಿ, ಪಕ್ಷದ ಸಂಘಟನೆಯಲ್ಲಿ ಡಿಕೆಶಿ ಯೋಗದಾನದ ಬಗ್ಗೆ ಹಾಡಿ ಹೊಗಳಿದರು. ಪಕ್ಷ ಸಂಕಷ್ಟದಲ್ಲಿದ್ದಾಗ ಹೋರಾಟ ಮಾಡಿದವರು ಡಿಕೆ ಶಿವಕುಮಾರ್ ಎನ್ನುತ್ತಲೇ, ಇವರು ಸದ್ಯದಲ್ಲೇ ಸಿಎಂ ಆಗಲಿದ್ದಾರೆ ಎನ್ನುವ ಮೂಲಕ ನವೆಂಬರ್ ವೇಳೆಗೆ ಅಧಿಕಾರ ಹಂಚಿಕೆ ಆಗುವ ಸುಳಿವು ನೀಡಿದ್ದಾರೆ.
ಶಿವಕುಮಾರ್ ಅವರಿಗೆ ಮೊದಲು ಟಿಕೆಟ್ ಕೊಡಿಸಿದ್ದೇ ನಾನು. ಅವರು ಸದ್ಯದಲ್ಲೇ ಸಿಎಂ ಆಗಬೇಕೆಂಬುದು ನಮ್ಮೆಲ್ಲರ ಹಾರೈಕೆ. ಜನರ ಮನಸ್ಸಿನಲ್ಲೂ ಇವರು ಸಿಎಂ ಆಗೋದು ತೀರ್ಮಾನವಾಗಿ ಹೋಗಿದೆ. ಇದು ಯಾರೂ ಕೊಡುವ ವರವಲ್ಲ. ಬದಲಾಗಿ ಕೆಲಸದ ಮೂಲಕ ಸಂಪಾದನೆ ಮಾಡುವ ಪದವಿ. ಡಿಕೆಶಿ ಕೆಲಸ ಮಾಡಿದ್ದಾರೆ. ಒಳ್ಳೆಯ ನಾಯಕತ್ವ ಕೊಟ್ಟಿದ್ದಾರೆ. ಸಿಎಂ ಸ್ಥಾನ ತಪ್ಪಿಸಲು ಯಾರಿಂದಲೂ ಸಾಧ್ಯವಾಗದು ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈಗಾಗಲೇ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ನಾನಾ ರೀತಿಯ ಹೇಳಿಕೆಗಳು ಬರುತ್ತಿರುವಾಗಲೇ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಇಂತಹ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮತ್ತೆ ಸಂಚಲನ ಮೂಡಿಸಿದೆ.
No one can stop DK Shivakumar from becoming CM of Karnataka says Congress leader Veerappa Moily in karkala. Veerappa Moily has made a bold statement, saying that no one can stop Shivakumar from becoming the next Chief Minister of the state. He further asserted that it is a 'settled matter' and it's only a matter of time, as it is something bound to happen.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm