ಬ್ರೇಕಿಂಗ್ ನ್ಯೂಸ್
03-03-25 12:33 pm HK News Desk ಕರ್ನಾಟಕ
ಮೈಸೂರು, ಮಾ 03: "ನಟ-ನಟಿಯರು ಕನ್ನಡಿಗರಿಂದಲೇ ಕನ್ನಡ ನೆಲದಲ್ಲಿ ಸ್ಟಾರ್ ಆಗಿರುವುದು. ನಿಮಗೆ ಸಿನಿಮಾಗಳಿಗೆ ಸಬ್ಸಿಡಿ ಬೇಕು ಅಂದಾಗ, ನಮ್ಮ ಬಳಿ ಬರ್ತೀರ, ಆದ್ರೆ ಕನ್ನಡದ ನೆಲ, ಜಲ, ಭಾಷೆ ಬೇಡವೇ? ನಟ್ಟು, ಬೋಲ್ಟ್ ನಾಳೆ ಅಲ್ಲ, ಇವತ್ತೇ ಟೈಟ್ ಮಾಡ್ಬೇಕು" ಎಂದು ಡಿಕೆಶಿ ಹೇಳಿಕೆಯನ್ನ ಶಾಸಕ ಶಾಸಕ ರವಿಕುಮಾರ್ ಗಣಿಗ ಸಮರ್ಥಿಸಿಕೊಂಡರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ತೆಲಂಗಾಣದಲ್ಲಿ ಸಿಎಂ ರೇವಂತ್ ರೆಡ್ಡಿ ಮಾಡಿರುವ ರೀತಿಯಲ್ಲೇ ನಾವೂ ಮಾಡಬೇಕು. ಕನ್ನಡದ ಕಾರ್ಯಕ್ರಮ ಎಂದರೆ ಕನ್ನಡದ ನಟರಿಗೆ ಏಕೆ ಅಸಡ್ಡೆ?. ವಿಧಾನಸೌಧದ ಮುಂದೆ ನಿಮಗಾಗಿ ಕಾರ್ಯಕ್ರಮ ಮಾಡಿದ್ದೇವೆ. ಮರ್ಯಾದೆಯಿಂದ ಆಹ್ವಾನ ಕಳುಹಿಸಿದ್ದರೆ ಏಕೆ ಬರುವುದಿಲ್ಲ?. ಕ್ಯಾನ್ಸರ್ ಕಾಯಿಲೆಗೆ ಶಸ್ತ್ರಚಿಕಿತ್ಸೆ ಆಗಿದ್ದರೂ ಶಿವರಾಜ್ ಕುಮಾರ್ ಬಂದಿದ್ದಾರೆ. ಇನ್ನುಳಿದವರಿಗೆ ಏನಾಗಿದೆ. ನಮ್ಮ ಸರ್ಕಾರ ಪ್ರಶಸ್ತಿ ಕೊಟ್ಟರೆ ಬೇಡ ಎನ್ನುತ್ತೀರಿ. ಅದೇ ಬಾಲಿವುಡ್ನವರು ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೆದುಕೊಳ್ಳುತ್ತೀರಿ" ಎಂದು ಕಿಡಿಕಾರಿದರು.
ಡಾ.ರಾಜಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೆಲ್ಲ ರಾಜ್ಯೋತ್ಸವಕ್ಕೂ ಬರುತ್ತಿದ್ದರು. ಅಭಿಮಾನಿಗಳು ಅವರನ್ನು ಹೊತ್ತು ಮೆರೆಸಿದ್ದಕ್ಕೆ ಅವರು ಸ್ಟಾರ್ಗಳಾಗಿದ್ದು. ಈಗಿನ ನಟರಲ್ಲಿ ದರ್ಶನ್ ಹೊರತುಪಡಿಸಿ ಎಷ್ಟು ಜನ ರಾಜ್ಯೋತ್ಸವ ಸಮಾರಂಭಕ್ಕೆ ಬರುತ್ತಾರೆ?. ಇದೆಲ್ಲವನ್ನೂ ನಾವು ಪ್ರಶ್ನೆ ಮಾಡಬಾರದೇ?. ಕಾರ್ಯಕ್ರಮಕ್ಕೆ ಬರುವುದು ನಿಮ್ಮ ವಿವೇಚನೆಯಾದರೆ. ನಿಮ್ಮ ಸಿನಿಮಾ ನೋಡಬೇಕೇ ಬೇಡವೇ ಅನ್ನುವುದು ನಮ್ಮ ವಿವೇಚನೆ ಎಂದು ಶಾಸಕ ಗಣಿಕ ಎಚ್ಚರಿಕೆ ರವಾನಿಸಿದರು.
Mysuru Mla Ravi Kumar ganiga supports DK remarks on Kannada film industry. ‘I Know Where to Tighten the Nuts and Bolts’: DK Shivakumar Explodes Over Low Celebrity Turnout at Film Festival
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm