ಬ್ರೇಕಿಂಗ್ ನ್ಯೂಸ್
11-03-25 03:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಕಿರು ಫೈನಾನ್ಸ್ ಸಂಸ್ಥೆಗಳು ರಾಜ್ಯದಲ್ಲಿ ಕಪ್ಪು ಹಣವನ್ನು ಬಿಳಿಯಾಗಿಸುವ ಕೂಪಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು ವರ್ಷದಲ್ಲಿ 40 ಸಾವಿರ ಕೋಟಿಯಷ್ಟು ಕಪ್ಪು ಹಣವನ್ನು ಪಡೆದು ಬಿಳಿಯಾಗಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ ಎಂದು ಕಾನೂನು ಸಚಿವ ಎಚ್ಕೆ ಪಾಟೀಲ್ ಹೇಳಿದ್ದಾರೆ.
ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಮೈಕ್ರೋ ಫೈನಾನ್ಸ್) ನಿಯಂತ್ರಣ ಮಸೂದೆಗೆ ವಿಧಾನಸಭೆಯಲ್ಲಿ ಸೋಮವಾರ ಅನುಮೋದನೆ ಸಿಕ್ಕಿದೆ. ವಿಧೇಯಕದ ಕುರಿತು ಮಾತನಾಡಿದ ಸಚಿವ ಎಚ್.ಕೆ ಪಾಟೀಲ್, ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಜನಸಾಮಾನ್ಯರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸುವುದು ಈ ಕಾಯಿದೆಯ ಉದ್ದೇಶ. ಕಾನೂನು ಬದ್ಧ ಲೇವಾದೇವಿಯನ್ನು ಕಾಯಿದೆ ನಿಷೇಧಿಸುವುದಿಲ್ಲ. ಆದರೆ ಬಲವಂತದ ಸಾಲ ವಸೂಲಾತಿಯನ್ನು ಕಾಯ್ದೆ ನಿರ್ಬಂಧಿಸಲಿದೆ. ಅಧಿಕ ಬಡ್ಡಿಯಿಂದಾಗಿ ಸಾಲಗಾರರು ಬೀದಿಗೆ ಬರುವಂತಹ ಮತ್ತು ಆತಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ದೂಡುವುದನ್ನು ತಡೆಯಲು ಹಾಗೂ ತಪ್ಪಿತಸ್ಥರಿಗೆ 10 ವರ್ಷ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲು ಕಾಯ್ದೆ ತರಲಾಗಿದೆ ಎಂದು ಹೇಳಿದರು.
ಕಿರು ಸಾಲ ಮತ್ತು ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳು, ಬಡ ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲದವರನ್ನು ಪೀಡಿಸುವಂತಹ ಪ್ರಕರಣಗಳು ವರದಿಯಾಗಿವೆ. ದುಪ್ಪಟ್ಟು ಬಡ್ಡಿ ವಿಧಿಸಿ ಸಾಲಗಾರರನ್ನು ತೊಂದರೆಗೆ ಸಿಲುಕಿಸುವುದನ್ನು ತಡೆಯಲು ಈ ವಿಧೇಯಕ ತರಲಾಗಿದೆ. ಕಪ್ಪು ಹಣಕ್ಕೆ ಕಡಿವಾಣ ಹಾಕುವುದು, ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಕಿರುಕುಳ ತಪ್ಪಿಸುವ ಉದ್ದೇಶವಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ವ್ಯವಹಾರದಲ್ಲಿ ಸುಮಾರು 40 ಸಾವಿರ ಕೋಟಿ ರೂ. ನಗದು ವಹಿವಾಟು ಚಲಾವಣೆಯಲ್ಲಿದೆ. ಇದು ಯಾರ ಹಣ? ಸರಕಾರದ ಅನುದಾನವಿಲ್ಲದೆ, ಆರ್ಬಿಐ ಸಹಾಯ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ವಹಿವಾಟು ನಡೆಯುತ್ತಿರುವುದರ ಅರ್ಥವೇನು? ಇದೆಲ್ಲವೂ ಕಪ್ಪು ಹಣ ಎಂಬುದರಲ್ಲಿ ಅನುಮಾನ ಬೇಡ. ಬೇರೆ ಯಾವುದೇ ಪ್ರಾಮಾಣಿಕ ವ್ಯವಹಾರವು ಈ ರೀತಿಯ ಲಾಭವನ್ನು ಗಳಿಸಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಕಪ್ಪು ಹಣವನ್ನು ಹೂಡಿಕೆ ಮಾಡುತ್ತಾನೆ. ಇದಕ್ಕೆ ಪ್ರತಿಯಾಗಿ ಶೇ.40-50ರಷ್ಟು ಲಾಭವನ್ನು ಪಡೆಯುತ್ತಾನೆ ಅಂದರೆ ಇದೆಲ್ಲ ಕಾನೂನು ರೀತ್ಯ ಅಪರಾಧ. ಇಲ್ಲಿ ಹಣ ಸಾಲ ನೀಡುವವರು ಶ್ರೀಮಂತರಷ್ಟೇ ಅಲ್ಲ, ಅಕ್ರಮವಾಗಿ ಸಂಪತ್ತು ಗಳಿಸುತ್ತಿರುವುದಕ್ಕೆ ಮೈಕ್ರೋ ಫೈನಾನ್ಸ್ ಕಾರಣವಾಗುತ್ತಿದೆ ಎಂದು ಎಚ್.ಕೆ ಪಾಟೀಲ್ ಹೇಳಿದರು.
According to Karnataka's Law & Parliamentary Affairs Minister H K Patil, the business being done by unregistered money lenders in the state amounted to Rs 40,000 crore in 'black money'. He was speaking at the current Karanataka Assembly session where...
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm