ಬ್ರೇಕಿಂಗ್ ನ್ಯೂಸ್
14-03-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14 : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ಕಲ್ಪಿಸಿದ ಆರೋಪಕ್ಕೆ ಪುಷ್ಟಿ ಸಿಕ್ಕ ಬೆನ್ನಲ್ಲೇ ರಾಜ್ಯ ಪೊಲೀಸ್ ಗೃಹ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿದೆ. ಡಿಜಿಪಿ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮೂಲಕ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎನ್ನಲಾಗುತ್ತಿದೆ.
ಇದೇ ವೇಳೆ, ಕಾನೂನು ಬಾಹಿರವಾಗಿ ಶಿಷ್ಟಾಚಾರ ಸೌಲಭ್ಯ ನೀಡಿದ ಪ್ರಕರಣ ಸಂಬಂಧಿಸಿ ರಾಜ್ಯ ಸರ್ಕಾರ ನೇಮಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ತನಿಖಾ ತಂಡಕ್ಕೆ ಸಿಐಡಿ ವಿಭಾಗದ ಡಿಐಜಿ ಕೃಷ್ಣವಂಶಿ ಅವರನ್ನು ಸರ್ಕಾರ ನೇಮಿಸಿದೆ. ಎಸಿಎಸ್ ಗೌರವ ಗುಪ್ತಾ ಅವರಿಗೆ ಡಿಐಜಿ ಸಹಾಯಕ ತನಿಖಾಧಿಕಾರಿ ಆಗಿರಲಿದ್ದಾರೆ.
ರನ್ಯಾಗೆ ಪ್ರೋಟೋಕಾಲ್ ನೀಡುಲು ಸೂಚಿಸಿದ್ದ ಡಿಜಿಪಿ!
‘ನನಗೆ ದುಬೈನಿಂದಲೇ ರನ್ಯಾ ರಾವ್ ಕರೆ ಮಾಡಿ ಶಿಷ್ಟಾಚಾರ (ಪ್ರೋಟೋಕಾಲ್) ಪ್ರಕಾರ ಕರೆದುಕೊಂಡು ಹೋಗುವಂತೆ ಹೇಳಿದ್ದರು. ಅಲ್ಲದೆ, ವಿಮಾನ ನಿಲ್ದಾಣದಲ್ಲಿ ಕುಟುಂಬದವರು ಯಾರೇ ಬಂದರೂ ಶಿಷ್ಟಾಚಾರ ನೀಡುವಂತೆ ಡಿಜಿಪಿ ರಾಮಚಂದ್ರರಾವ್ ಅವರ ಸೂಚನೆ ಇತ್ತು ಎಂದು ಡಿಆರ್ಐ ವಿಚಾರಣೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆ ಶಿಷ್ಟಾಚಾರ ವಿಭಾಗದ ಹೆಡ್ ಕಾನ್ಸ್ಟೇಬಲ್ ಬಸವರಾಜು ಹೇಳಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ತಮ್ಮ ಮಲ ಮಗಳು ರನ್ಯಾ ಅವರಿಗೆ ಕಾನೂನುಬಾಹಿರವಾಗಿ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯವನ್ನು ಡಿಜಿಪಿ ರಾಮಚಂದ್ರರಾವ್ ಕಲ್ಪಿಸಿದ್ದರು ಎಂಬ ಆರೋಪಕ್ಕೆ ಸಾಕ್ಷಿ ಸಿಕ್ಕಂತಾಗಿದೆ. ಇದು ಡಿಜಿಪಿಗೆ ಮತ್ತಷ್ಟು ಸಂಕಷ್ಟ ತಂದಿದ್ದು ಡಿಆರ್ ಐ ಅಧಿಕಾರಿಗಳು ಅವರನ್ನು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ. ಹೀಗಾಗಿ ಅವರನ್ನು ರಜೆಯಲ್ಲಿ ಕಳುಹಿಸುವ ನಿರ್ಧಾರಕ್ಕೆ ಬರಲಾಗಿದೆ. ಮಾ.3ರಂದು ರಾತ್ರಿ ದುಬೈನಿಂದ ಕೆಐಎನಲ್ಲಿ ಬಂದಿಳಿದಿದ್ದ ರನ್ಯಾರನ್ನು ಡಿಆರ್ ಐ ವಶಕ್ಕೆ ಪಡೆದ ಸಂದರ್ಭದಲ್ಲಿ ಬಸವರಾಜು ಜೊತೆಗಿದ್ದರು.
ರಾಮಚಂದ್ರರಾವ್ ಸೂಚನೆಯಂತೆ ಪ್ರತಿಬಾರಿ ರನ್ಯಾರಾವ್ಗೆ ಪ್ರೋಟೋಕಾಲ್ ವ್ಯವಸ್ಥೆ ಮಾಡಲಾಗುತ್ತಿತ್ತು. ಮಾರ್ಚ್ 03ರಂದು ರನ್ಯಾರಾವ್ ನನಗೆ ಕರೆ ಮಾಡಿ ದುಬೈನಿಂದ ಸಂಜೆ 6:30ಕ್ಕೆ ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ತಿಳಿಸಿದ್ದರು. ಆಕೆ ಬೆಂಗಳೂರಿಗೆ ಬಂದಾಗ ನಾನು ಗ್ರೀನ್ ಚಾನೆಲ್ ವ್ಯವಸ್ಥೆ ಮಾಡಿದ್ದೆ. ರನ್ಯಾರಾವ್ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವಿಚಾರ ನನಗೆ ಗೊತ್ತಿರಲಿಲ್ಲ ಎಂದು ಬಸವರಾಜು ಹೇಳಿಕೆ ನೀಡಿದ್ದಾರೆ.
In a fresh development in the intensifying row over the gold smuggling case involving Kannada actress Ranya Rao, Basavaraj, the protocol officer who assisted her in getting clearance at Bengaluru's Kempegowda International Airport, alleged that he only followed Ranya's stepfather and Karnataka DGP Ramachandra Rao's direct instruction.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm