ಬ್ರೇಕಿಂಗ್ ನ್ಯೂಸ್
18-03-25 01:08 pm HK News Desk ಕರ್ನಾಟಕ
ತುಮಕೂರು, ಮಾ.18 : ಬೇಸಗೆ ಆವರಿಸುತ್ತಿದ್ದಂತೆ ನೀರಿಗೆ ಹಾಹಾಕಾರವೂ ಎದ್ದಿದೆ. ಕೆಲವು ಕಡೆ ಕುಡಿಯುವ ನೀರಿಗೇ ತತ್ವಾರ ಇದೆ. ಆದರೆ ಇಲ್ಲೊಂದು ಕಡೆ ಕುಡಿಯುವ ನೀರಿನ ವಿಚಾರದಲ್ಲಿ ಉಂಟಾದ ವಾಗ್ವಾದ ಸಾಫ್ಟ್ವೇರ್ ಇಂಜಿನಿಯರ್ ಗಳಿಬ್ಬರ ಮದುವೆಯನ್ನೇ ನಿಲ್ಲಿಸಿಬಿಟ್ಟಿದೆ. ಎರಡು ಕುಟುಂಬಗಳ ನಡುವಿನ ಸಂಬಂಧಕ್ಕೇ ಎಳ್ಳುನೀರು ಬಿಟ್ಟಿದೆ.
ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು. ವಧು ವರರಿಬ್ಬರೂ ಎಂಜಿನಿಯರಿಂಗ್ ಪದವೀಧರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸದಲ್ಲಿದ್ದಾರೆ. ಶನಿವಾರ ಆರತಕ್ಷತೆ ನಡೆದು ಭಾನುವಾರ ಬೆಳಗ್ಗೆ 10.30ರಿಂದ 11.30ರ ಸಮಯದಲ್ಲಿ ಮದುವೆ ಮುಹೂರ್ತ ನಡೆಯಬೇಕಿತ್ತು. ಈ ನಡುವೆ ಶನಿವಾರ ಸಂಜೆ ಆರತಕ್ಷತೆ ಮುಗಿಸಿಕೊಂಡು ಊಟಕ್ಕೆ ಹೋದ ವರನ ಕಡೆಯ ಕೆಲವರಿಗೆ ಕುಡಿಯುವ ನೀರು ಸಿಕ್ಕಿಲ್ಲ ಎನ್ನುವ ವಿಚಾರದಲ್ಲಿ ತಗಾದೆ ಉಂಟಾಗಿದೆ.
ಇದೇ ವಿಚಾರ ಮುಂದಿಟ್ಟು ವಧು ಹಾಗೂ ವರನ ಕಡೆಯವರು ಮಾತಿನ ಚಕಮಕಿ ನಡೆಸಿದ್ದಾರೆ. ವರನ ಕಡೆಯವರು ವಧುವಿನ ಕಡೆಯವರನ್ನು ಹೀಯಾಳಿಸಿದ್ದರಿಂದ ಜಗಳ ವಿಕೋಪಕ್ಕೆ ಹೋಗಿತ್ತು. ನೀರಿನ ವಿಚಾರದಲ್ಲಿ ಎದ್ದ ವಾಗ್ವಾದ ಮದುವೆಯನ್ನೆರ ನಿಲ್ಲಿಸುವ ಹಂತಕ್ಕೆ ಹೋಗಿದೆ. ಈ ನಿಟ್ಟಿನಲ್ಲಿ ಎರಡೂ ಕುಟುಂಬದ ಹಿರಿಯರು ಸಂಧಾನ ನಡೆಸಿದ್ದರು.
ಭಾನುವಾರ ಬೆಳಗ್ಗೆಯೂ ಸಂಧಾನ ಪ್ರಯತ್ನಗಳು ಮುಂದುವರಿದಿತ್ತು. ಎರಡೂ ಕಡೆಯಿಂದಲೂ ವರ ಮತ್ತು ವಧುವನ್ನು ಒಪ್ಪಿಸುವ ಪ್ರಯತ್ನಗಳು ನಡೆದವು. ಆದರೆ ವರ ಮತ್ತು ವಧು ಇಬ್ಬರೂ ಅದನ್ನೇ ಪ್ರತಿಷ್ಠೆಯ ವಿಷಯವಾಗಿಸಿದ್ದರಿಂದ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಲಿಲ್ಲ. ಜಗಳ ಮರೆತು ಹಸೆಮಣೆ ಎರುವಂತೆ, ವಧೂ ವರರ ಪೋಷಕರು ಮನವೊಲಿಸಿದರೂ ಪ್ರಯೋಜನ ಆಗಲಿಲ್ಲ. ಭಾನುವಾರ ಮಧ್ಯಾಹ್ನ 12 ಗಂಟೆ ವರೆಗೂ ಸಂಧಾನ ನಡೆಯಿತಾದರೂ, ಕೊನೆ ವರೆಗೂ ವಧು ತನ್ನ ಪಟ್ಟು ಬಿಡದ ಕಾರಣ ಮದುವೆ ಮುರಿದು ಬಿತ್ತು.
A much-anticipated wedding ceremony of a local software engineer was abruptly called off at the last moment due to an unexpected dispute over water usage in Tumkur.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm