ಬ್ರೇಕಿಂಗ್ ನ್ಯೂಸ್
18-03-25 01:08 pm HK News Desk ಕರ್ನಾಟಕ
ತುಮಕೂರು, ಮಾ.18 : ಬೇಸಗೆ ಆವರಿಸುತ್ತಿದ್ದಂತೆ ನೀರಿಗೆ ಹಾಹಾಕಾರವೂ ಎದ್ದಿದೆ. ಕೆಲವು ಕಡೆ ಕುಡಿಯುವ ನೀರಿಗೇ ತತ್ವಾರ ಇದೆ. ಆದರೆ ಇಲ್ಲೊಂದು ಕಡೆ ಕುಡಿಯುವ ನೀರಿನ ವಿಚಾರದಲ್ಲಿ ಉಂಟಾದ ವಾಗ್ವಾದ ಸಾಫ್ಟ್ವೇರ್ ಇಂಜಿನಿಯರ್ ಗಳಿಬ್ಬರ ಮದುವೆಯನ್ನೇ ನಿಲ್ಲಿಸಿಬಿಟ್ಟಿದೆ. ಎರಡು ಕುಟುಂಬಗಳ ನಡುವಿನ ಸಂಬಂಧಕ್ಕೇ ಎಳ್ಳುನೀರು ಬಿಟ್ಟಿದೆ.
ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು. ವಧು ವರರಿಬ್ಬರೂ ಎಂಜಿನಿಯರಿಂಗ್ ಪದವೀಧರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸದಲ್ಲಿದ್ದಾರೆ. ಶನಿವಾರ ಆರತಕ್ಷತೆ ನಡೆದು ಭಾನುವಾರ ಬೆಳಗ್ಗೆ 10.30ರಿಂದ 11.30ರ ಸಮಯದಲ್ಲಿ ಮದುವೆ ಮುಹೂರ್ತ ನಡೆಯಬೇಕಿತ್ತು. ಈ ನಡುವೆ ಶನಿವಾರ ಸಂಜೆ ಆರತಕ್ಷತೆ ಮುಗಿಸಿಕೊಂಡು ಊಟಕ್ಕೆ ಹೋದ ವರನ ಕಡೆಯ ಕೆಲವರಿಗೆ ಕುಡಿಯುವ ನೀರು ಸಿಕ್ಕಿಲ್ಲ ಎನ್ನುವ ವಿಚಾರದಲ್ಲಿ ತಗಾದೆ ಉಂಟಾಗಿದೆ.
ಇದೇ ವಿಚಾರ ಮುಂದಿಟ್ಟು ವಧು ಹಾಗೂ ವರನ ಕಡೆಯವರು ಮಾತಿನ ಚಕಮಕಿ ನಡೆಸಿದ್ದಾರೆ. ವರನ ಕಡೆಯವರು ವಧುವಿನ ಕಡೆಯವರನ್ನು ಹೀಯಾಳಿಸಿದ್ದರಿಂದ ಜಗಳ ವಿಕೋಪಕ್ಕೆ ಹೋಗಿತ್ತು. ನೀರಿನ ವಿಚಾರದಲ್ಲಿ ಎದ್ದ ವಾಗ್ವಾದ ಮದುವೆಯನ್ನೆರ ನಿಲ್ಲಿಸುವ ಹಂತಕ್ಕೆ ಹೋಗಿದೆ. ಈ ನಿಟ್ಟಿನಲ್ಲಿ ಎರಡೂ ಕುಟುಂಬದ ಹಿರಿಯರು ಸಂಧಾನ ನಡೆಸಿದ್ದರು.
ಭಾನುವಾರ ಬೆಳಗ್ಗೆಯೂ ಸಂಧಾನ ಪ್ರಯತ್ನಗಳು ಮುಂದುವರಿದಿತ್ತು. ಎರಡೂ ಕಡೆಯಿಂದಲೂ ವರ ಮತ್ತು ವಧುವನ್ನು ಒಪ್ಪಿಸುವ ಪ್ರಯತ್ನಗಳು ನಡೆದವು. ಆದರೆ ವರ ಮತ್ತು ವಧು ಇಬ್ಬರೂ ಅದನ್ನೇ ಪ್ರತಿಷ್ಠೆಯ ವಿಷಯವಾಗಿಸಿದ್ದರಿಂದ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಲಿಲ್ಲ. ಜಗಳ ಮರೆತು ಹಸೆಮಣೆ ಎರುವಂತೆ, ವಧೂ ವರರ ಪೋಷಕರು ಮನವೊಲಿಸಿದರೂ ಪ್ರಯೋಜನ ಆಗಲಿಲ್ಲ. ಭಾನುವಾರ ಮಧ್ಯಾಹ್ನ 12 ಗಂಟೆ ವರೆಗೂ ಸಂಧಾನ ನಡೆಯಿತಾದರೂ, ಕೊನೆ ವರೆಗೂ ವಧು ತನ್ನ ಪಟ್ಟು ಬಿಡದ ಕಾರಣ ಮದುವೆ ಮುರಿದು ಬಿತ್ತು.
A much-anticipated wedding ceremony of a local software engineer was abruptly called off at the last moment due to an unexpected dispute over water usage in Tumkur.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm